ಕಡಬ: ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ಒಳಗಾದವರನ್ನು ಚೋಮ( 52) ಎಂದು ಗುರುತಿಸಲಾಗಿದೆ.
ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ದಾಳಿ ನಡೆಸಿದೆ. ಗಾಯಗೊಂಡ ಚೋಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.