News Karnataka Kannada
Saturday, April 27 2024
ಮನರಂಜನೆ

ಮಂಗಳೂರು: ಆ.18ರ ಕೃಷ್ಣ ಜನ್ಮಾಷ್ಟಮಿಯಂದು ತೆರೆ ಕಾಣಲಿದೆ ಅಬತರ ಸಿನಿಮಾ

Abathara
Photo Credit : Facebook

ಮಂಗಳೂರು: ಕೋವಿಡ್ ಸಮಯದಲ್ಲಿ ರೂಪುಗೊಂಡ ಸಿನಿಮಾ ಅಬತರ ಆ.18ರ ಕೃಷ್ಣ ಜನ್ಮಾಷ್ಟಮಿಯಂದು ತೆರೆ ಕಾಣಲಿದೆ. ಹಲವಾರು ವಿಶೇಷತೆಗಳನ್ನು ಒಳಗೊಂಡ ಈ ಸಿನಿಮಾವನ್ನು ಖ್ಯಾತ ರಂಗ ನಿರ್ದೇಶಕ ದೇವದಾಸ್ ಕಾಪಿಕಾಡ್ ಹಾಗೂ ಅವರ ಪುತ್ರ ಅರ್ಜುನ್ ಕಾಪಿಕಾಡ್ ಕೋವಿಡ್ ಕಾಲದಲ್ಲಿ ರೂಪಿಸಿದ್ದು, ಇದೀಗ ರಿಲೀಸ್ ಆಗಲಿದೆ‌.

ಈ ಸಿನಿಮಾದಲ್ಲಿ ನಾಯಕ ನಟನಾಗಿ ಅರ್ಜುನ್ ಕಾಪಿಕಾಡ್ ಅವರು ಅಭಿನಯಿಸುವುದರೊಂದಿಗೆ ಮೊದಲ ಬಾರಿಗೆ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ‌. ವಿಶೇಷವೆಂದರೆ ಸಿನಿಮಾದ ರಿಲೀಸ್ ಆಗೋದಕ್ಕಿಂತ ಮೊದಲೇ ಮಂಗಳೂರು, ಮೂಡುಬಿದಿರೆ, ಪುತ್ತೂರು, ಉಡುಪಿ, ಪಡುಬಿದ್ರೆ, ಕಿನ್ನಿಗೋಳಿ, ಗುರುಪುರ, ಕುಲಶೇಖರ ಮೊದಲಾಡೆ ಇರುವ ಅನಾಥಾಶ್ರಮದ ಮಕ್ಕಳಿಗೆ ಸಿನಿಮಾ ತೊರಿಸುವ ಕೆಲಸವನ್ನು ಚಿತ್ರತಂಡ ವ್ಯವಸ್ಥೆ ಮಾಡಿದೆ. ಆ.16 ಹಾಗೂ 17ರಂದು 800ಕ್ಕೂ ಅಧಿಕ ಮಕ್ಕಳು ಕೆಎಸ್ಆರ್ ಟಿಸಿ ಬಳಿಯಿರುವ ಆ್ಯಡ್ ಲ್ಯಾಬ್ ಚಿತ್ರಮಂದಿರದಲ್ಲಿ ಈ ಸಿನಿಮಾ ವೀಕ್ಷಿಸಲಿದ್ದಾರೆ.

ಸಂಪೂರ್ಣ ಹಾಸ್ಯಮಯ ಕಥಾಹಂದರವುಳ್ಳ ಈ‌‌ ಸಿನಿಮಾಕ್ಕೆ ದೇವದಾಸ್ ಕಾಪಿಕಾಡ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬೊಳ್ಳಿ ಮೂವೀಸ್ ಲಾಂಛನದಡಿಯಲ್ಲಿ ಮೂಡಿ ಬಂದ ಅಬತರ ಸಿನಿಮಾದ ನಟಿ ಗಾನಾ ಭಟ್ ಮೊದಲ ಬಾರಿಗೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕ ನಕುಲ್ ಅಭ್ಯಂಕರ್ ಈ ಸಿನಿಮಾಗೆ ಮೊದಲ ಬಾರಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ ಪದವಿ ವಿದ್ಯಾರ್ಥಿ ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು ಹಾಗೂ ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು