ಮಂಗಳೂರು: ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನನಗೆ ಟಿಕೆಟ್ ತಪ್ಪಿಸಿದ್ದು, ಡಿ.ಕೆ. ಶಿವಕುಮಾರ್ ಎಂದು ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಹಿಯುದ್ದೀನ್ ಬಾವಾ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್, ನನ್ನನ್ನು ವೈರಿಯಂತೆ ಕಾಡಿದ್ದಲ್ಲದೆ, ಕ್ಷೇತ್ರದಲ್ಲಿ ಪರಿಚಯ ಇಲ್ಲದ ಇನಾಯತ್ ಅಲಿ ಅವರನ್ನು ಕಣಕ್ಕಿಳಿಸುವ ಮೂಲಕ 20 ವರ್ಷದಿಂದ ಜನಸೇವೆಯಲ್ಲಿ ತೊಡಗಿದ್ದ ನನಗೆ ದ್ರೋಹ ಬಗೆದಿದ್ದಾರೆ. ಇನಾಯತ್ ಅಲಿ ಅವರಿಗೆ ಕ್ಷೇತ್ರದ ಜನರೊಂದಿಗೆ ಒಡನಾಟವಿಲ್ಲ. ಕೇವಲ ಎನ್ಎಸ್ಯುಐ ಕಾರ್ಯದರ್ಶಿ ಆದವರನ್ನು ಎಲ್ಲಿಂದಲೋ ಕರೆತಂದು ನನ್ನ ವಿರುದ್ಧ ಪಿತೂರಿ ನಡೆಸುವ ಉದ್ದೇಶದಿಂದಲೇ ಮಂಗಳೂರು ದಕ್ಷಿಣ ಕ್ಷೇತ್ರದ ಉಸ್ತುವಾರಿ ನೀಡಿದ್ದರು. ಅಲ್ಲದೆ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ.
ಅಲಿ ಅವರು ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸುವ ಬದಲಿಗೆ ನನ್ನ ಬೆಂಬಲಿಗ ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ, ವಿವಿಧ ಆಮಿಷ ಒಡ್ಡಿ ಗೊಂದಲ ಸೃಷ್ಟಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಿಇಸಿ ಸಭೆಯಲ್ಲಿ ಇನಾಯತ್ ಅಲಿ ನ್ಯಾಷನಲ್ ಹೆರಾಲ್ಡ್ಗೆ 2 ಕೋಟಿ ರೂ. ನೀಡಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ. ಇನಾಯತ್ ಅಲಿ ಹಣ ಮಾಡಿದ್ದು ಹೇಗೆ ಎಂಬುದು ತಿಳಿದಿದೆ. ಡಿಕೆಶಿ ನೀರಾವರಿ ಸಚಿವರಾದ ಬಳಿಕ ಇನಾಯತ್ ಅಲಿ ಬಂದಿದ್ದು, ಡಿಕೆಶಿ ಅವರ ಪಾಲುದಾರ ಎಂಬ ನೆಲೆಯಲ್ಲಿ ಟಿಕೆಟ್ ನೀಡಲಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಹೊರತು ಪಡಿಸಿ ಉಳಿದೆಲ್ಲ ಕಾಂಗ್ರೆಸ್ ನಾಯಕರು ನನಗೆ ಬೆಂಬಲ ನೀಡಿದ್ದಾರೆ ಎಂದರು. ನಾನು ಈ ಹಿನ್ನಲೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ನಿರ್ಧಾರ ಕೈಗೊಂಡಿದ್ದೆ ಆದರೆ ಕಾರ್ಯಕರ್ತರು, ಅಭಿಮಾನಿಗಳು ಜೆಡಿಎಸ್ನಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಹಾಕಿದ್ದಾರೆ ಎಂದರು.
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…