ಮಂಗಳೂರು: ಅಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿದ ಮಾಜಿ ಸಚಿವ ರಮಾನಾಥ್ ರೈ, ನಳಿನ್ ಕುಮಾರ್ ಒಬ್ಬ ಹಾಸ್ಯಗಾರ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲ್ಲ ಡಾಲರ್ ರೇಟ್ ಮರಳು ದರದ ಬಗ್ಗೆ ಹೇಳಿಕೆ ನೀಡಿ ಜನರ ನಡುವೆ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ್ ರೈ ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರು ನೆಹರೂ ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿ ಇದ್ದಾರೆ ಅನ್ನೋದನ್ನ ತೋರಿಸುತ್ತಿದ್ದಾರೆ.
ಇವರು ದೇಶಪ್ರೇಮಿಗಳು ಎಂದು ಪ್ರಶ್ನೆ ಮಾಡಿದ್ದಾರೆ ಜವರಹಲಾಲ್ ನೆಹರೂ ಹನ್ನೊಂದು ವರ್ಷ ಜೈಲುವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕಾಗಿ ಆಗಿನ ನಾಯಕರಾದ ಶ್ರೀನಿವಾಸ್ ಮಲ್ಯ ಕಿಲ್ಲೆ ಅಂಥವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ್ ಮಲ್ಯ ಕಿಲ್ಲೆಯವರಿಗೆ ಅವಮಾನಿಸಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮನಾಥ್ ರೈ ಪ್ರಶ್ನಿಸಿದರು.