ಮಂಗಳೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ವ್ಯವಸ್ಥಿತ ಸಂಚು. ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದ ಟೈಲರ್ ಹತ್ಯೆ ಘಟನೆ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ನಡೆದಿದೆ. ಕಾಂಗ್ರೆಸ್ ಈಗ ಮೌನವಾಗಿರುವುದರ ಹಿನ್ನೆಲೆ ಏನು ಎಂದು ಪ್ರಶ್ನಿಸಿದ್ದಾರೆ.
ಹಿಂದೂ ಟೈಲರ್ ಹತ್ಯೆ ನಾಚಿಗೇಡಿನ ಸಂಗತಿ, ಇದೊಂದು ವ್ಯವಸ್ಥಿತಿ ಸಂಚಾಗಿದೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು. ಇಂತಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತೆ? ಇಂತಹ ಘಟನೆಯನ್ನು ಖಂಡಿಸುತ್ತೇವೆ. ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದರು.