News Karnataka Kannada
Thursday, May 09 2024
ಮಂಗಳೂರು

ಮಂಗಳೂರು ರೋಟರಿ ಸಮುದಾಯ ಇದರ ಸಂಯುಕ್ತಾಶ್ರಯದಲ್ಲಿ ವನಮಹೋತ್ಸವ

Rotary Community
Photo Credit : News Kannada

ಮಂಗಳೂರು: ರಾಷ್ಟ್ರೀಯ ಸೇವಾ ಭಾರತಿ ಸಂಯೋಜಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಕೇಸರಿ ಮಿತ್ರ ವೃಂದಾ ಸೇವಾ ಟ್ರಸ್ಟ್ , ಕೇಸರಿ ಮಂಡಳಿ ರೋಟರಿ ಕ್ಲಬ್ ಮಂಗಳೂರು ರೋಟರಿ ಸಮುದಾಯದಳ ಕುಂಪಲ ಇದರ ಸಂಯುಕ್ತಾಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ರೋ. ರಾಧಾಕೃಷ್ಣ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಸೇವಾ ಕಾರ್ಯ ನಿರಂತರವಾಗಿ ಮಾಡುತ್ತಾ ಬಂದಿರುವ ಸದಸ್ಯರನ್ನು ಅಭಿನಂದಿಸಿದರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ . ಗಿಡಗಳನ್ನು ನೆಟ್ಟು ಪೋಷಣೆ ಮಾಡೋಣ ಉತ್ತಮ ವಾತಾವರಣ ಮುಂದಿನ ಪೀಳಿಗೆಗೆ ಪರಿಚಯಿಸುವ ಪುಟ್ಟ ಪ್ರಯತ್ನ ಮಾಡೋಣ ಎಂದು ಹೇಳಿದರು ನೆಹರು ಯುವ ಕೇಂದ್ರ ಮಂಗಳೂರು ಇದರ ಅಧಿಕಾರಿ ಯಾದ ಶ್ರೀ ಜಗದೀಶ್ ಬೇಕಲ್ ಮಾತನಾಡುತ್ತಾ ಸಾಮಾಜಿಕ ಕಳಕಳಿಯೊಂದಿಗೆ ಸೇವಾ ಕಾರ್ಯಗಳನ್ನು ಮಾಡುತ್ತಿರುವ ಈ ಸಂಸ್ಥೆಯ ಕಾರ್ಯ ವೈಖರಿ ಎಲ್ಲದಕ್ಕೂ ಮಾದರಿಯಾಗಿದೆ ಅನೇಕ ವರ್ಷಗಳಿಂದ ಕೇಸರಿ ಮಿತ್ರ ವೃಂದದ ಚಟುವಟಿಕೆಗಳನ್ನು ಗಮನಿಸಿದ್ದೇನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಕಾರ್ಯಗಳನ್ನು ಮಾಡುವಲ್ಲಿ ನೆಹರು ಯುವ ಕೇಂದ್ರ ಕೂಡ ಸಹಾಯ ಹಸ್ತ ನೀಡಲಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಅಧ್ಯಕ್ಷರಾದ ಶ್ರೀ ಸತೀಶ್ ದೀಪಂ ಕೇಸರಿ ಮಿತ್ರ ವೃಂದಾ ಸೇವಾ ಟ್ರಸ್ಟ್ ಅಧ್ಯಕ್ಷ ರಾದ ಶ್ರೀ ಭಗವಾನ್ ದಾಸ್ ಶೆಟ್ಟಿ ಕೇಸರಿ ಮಾತ್ರ ಮಂಡಳಿ ಅಧ್ಯಕ್ಷ ರಾದ ಶ್ರೀಮತಿ ಆಶಾ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು ಸಂಯೋಜಕರಾದ ಶ್ರೀ ನಾರಾಯಣ ಕುಂಪಲ ಸ್ವಾಗತಿಸಿದರು ಭಗವಾನ್ ದಾಸ್ ಶೆಟ್ಟಿ ಧನ್ಯವಾದ ಅರ್ಪಿಸಿದರು ರಾ ಹೆ.66ರಲ್ಲಿ ಕುಂಪಲ ದಿಂದ ಕೋಟೆಕಾರು ವರೆಗೆ ರಸ್ತೆ ಬದಿಯಲ್ಲಿ ನೂರೈವತ್ತಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು