Categories: ಮಂಗಳೂರು

ಮಂಗಳೂರು: ಪಕ್ಕಲಡ್ಕದಲ್ಲಿ ಸೌಹಾರ್ದ ದೀಪಾವಳಿ ಆಚರಣೆ

ಮಂಗಳೂರು: ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಯೋಜಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ ಮಾತನಾಡುತ್ತಾ ಬದಲಾದ ಕಾಲಘಟ್ಟದಲ್ಲಿ ಸೌಹಾರ್ದತೆ ಅನ್ನೋದು ಹೆಸರಿಗಷ್ಟೇ ಉಳಿದಿದೆ. ಮತ್ತು ಇರುವ ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳು ನಿರಂತರವಾಗಿದ್ದು ಬಹುತೇಕ ಜನ ವಾಸ್ತವ ಪರಿಸ್ಥಿತಿಯ ಸಮೂಹಸನ್ನಿಗೆ ಒಳಗಾಗುವ ನಡುವೆಯೂ ಪಕ್ಕಲಡ್ಕ ಪ್ರದೇಶದ ಶಾಂತಿಪ್ರಿಯ ಜನ ಇವತ್ತಿಗೂ ಜಾತಿ ಮತ ಬೇಧವಿಲ್ಲದೆ ಪರಸ್ಪರ ಪ್ರೀತಿ, ಬಾಂಧವ್ಯ, ಸಹಕಾರಗಳ ಮೂಲಕ ಸೌಹಾರ್ದಮಯ ಬದುಕನ್ನು ನಡೆಸುತ್ತಿದ್ದಾರೆ.ಇದು ಇವತ್ತಿನ ಸಮಾಜಕ್ಕೆ ಮಾದರಿಯಾಗಬೇಕಾಗಿದೆ. ಆದರೆ ಇಂತಹ ಪ್ರೀತಿ,ಸಹಬಾಳ್ವೆ ನಡೆಸಲು ಸಾಧ್ಯವಾಗಿದ್ದು ಊರಲ್ಲಿ ಸದಾ ಸೌಹಾರ್ಧತೆ ಉಳಿಯಲು ಶ್ರಮಿಸುವ ಡಿವೈಎಫ್ಐ ಸಂಘಟನೆ ಮತ್ತು ಪಕ್ಕಲಡ್ಕ ಯುವಕ ಮಂಡಲದಂತಹ ಜನಪರ ಸಂಸ್ಥೆಗಳಿಂದ ಎಂದರು.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪಕ್ಕಲಡ್ಕ ಯುವಕ ಮಂಡಲದ ಮಾಜಿ ಮುಖಂಡರಾದ ಲಾರೆನ್ಸ್ ಡಿಸೋಜ, ನಾದಾ ಮಣಿನಾಲ್ಕೂರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಸತ್ಯ ನಾರಾಯಣ ಭಜನಾ ಮಂದಿರದ ಮಾಜಿ ಕಾರ್ಯದರ್ಶಿ ಲೊಕೇಶ್ ಎಂ, ಡಿವೈಎಫ್ಐ ಪಕ್ಕಲಡ್ಕ ಘಟಕದ ಅಧ್ಯಕ್ಷರಾದ ಜಗದೀಶ್ ಕುಲಾಲ್ ಉಪಸ್ಥಿತರಿದ್ದರು. ಪಕ್ಕಲಡ್ಕ ಯುವಕ ಮಂಡಲದ ಅಧ್ಯಕ್ಷರಾದ ದೀಪಕ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಉದ್ಘಾಟನಾ ಸಭಾ ಕಾರ್ಯಕ್ರಮದ ನಂತರ ಕಲಾವಿದ ನಾದಾ ಮಣಿನಾಲ್ಕೂರು ಅವರಿಂದ ಕತ್ತಲ ಹಾಡು, ಸೌಹಾರ್ದ ಗೀತೆಗಳ ಮೂಲಕ ಹಣತೆ ಹಚ್ಚಿ ಮನದ ಕತ್ತಲೆ ದೂರ ಮಾಡುವ ಗಾನ ಲಹರಿ ಪ್ರಸ್ತುತ ಪಡಿಸಿದರು. ಪಕ್ಕಲಡ್ಕ ಯುವಕ ಮಂಡಲದ ಕಾರ್ಯದರ್ಶಿ ಪ್ರೀತೇಶ್ ಬಜಾಲ್ ಸ್ವಾಗತಿಸಿ, ನಾಗರಾಜ್ ಬಜಾಲ್ ನಿರೂಪಿಸಿದರು, ಡಿವೈಎಫ್ಐ ಮುಖಂಡ ಧೀರಾಜ್ ಬಜಾಲ್ ವಂದಿಸಿದರು.

Ashika S

Recent Posts

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

13 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

36 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

40 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

47 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

59 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

1 hour ago