News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ

Kudroli
Photo Credit : R Bhat

ಮಂಗಳೂರು: ಈ ಬಾರಿ ನಮ್ಮ ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರ ಗಮನಸೆಳೆಯಿತು.

ಈ ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನು ಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಳೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ 75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ.

ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀಕ್ ಶೆಟ್ಟಿಯವರ ಕೈಚಳದಲ್ಲಿ ಈ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥ ಸೇವಾದಳ ತಂಡ ಸಹಕರಿಸಿದೆ. ಆ.13ರ ಮಧ್ಯಾಹ್ನದಿಂದಲೇ ಈ ತಿರಂಗ ರಚನೆಗೆ ಸಾಮಾಗ್ರಿಗಳನ್ನು ಖರೀದಿಸಲಾಗಿದೆ. ರಾತ್ರಿ 9ರಿಂದ ತಿರಂಗದ ಸ್ಕೆಚ್ ತಯಾರಿಸಲಾಗಿದ್ದು, ಆ.14ರ ಬೆಳಗ್ಗೆ 11ರ ವೇಳೆಗೆ ತಿರಂಗ ಸಂಪೂರ್ಣಗೊಂಡಿದೆ. ಇಂದು ಬೆಳಗ್ಗೆ ಸ್ವಲ್ಪ ಮಳೆ ಬಂದರೂ ಅದೃಷ್ಟವಶಾತ್ ತಿರಂಗ ಹಾಳಾಗದಿರುವುದು ವಿಶೇಷವೆನಿಸಿದೆ. ಕೇಂದ್ರದ ಮಾಜಿ ಸಚಿವ, ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರು ಈ ಬೃಹತ್ ತಿರಂಗವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು