News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕಾರ್ಯಕರ್ತರ ಸಭೆ

A meeting of the workers of Kadri North ward of Mangaluru City Corporation
Photo Credit : News Kannada

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.

ಕಾರ್ಯಕ್ರಮಕ್ಕೂ ಮುನ್ನ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಿಂದ ಕದ್ರಿ ಪಾರ್ಕ್ ಗೋರಕ್ಷನಾಥ ಸಭಾಭವನದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮಹಿಳಾ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ನರ್ತಿಸುತ್ತಾ, ಬಿಜೆಪಿಯ ಬೃಹತ್ ಧ್ವಜ ಹಾರಾಡಿಸುತ್ತಾ ಬಂದದ್ದು ವಿಶೇಷವಾಗಿತ್ತು. ಶಾಸಕ ಡಿ.ವೇದವ್ಯಾಸ್ ಕಾಮತ್ ಅವರನ್ನು ತೆರೆದ ವಾಹನದಲ್ಲಿ ಕರೆತರಲಾಯಿತು.

ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಭಾರತೀಯ ಜನತಾ ಪಾಟೀಯ ವಿಚಾರಧಾರೆಗಳನ್ನು ಒಪ್ಪುವಂತಹ ವಾರ್ಡ್ ಇದಾಗಿದೆ. ಕೇವಲ ಒಬ್ಬ ವ್ಯಕ್ತಿಯನ್ನು ಗೆಲ್ಲಿಸುವುದಷ್ಟೇ ಬಿಜೆಪಿ ಕಾರ್ಯಕರ್ತರ ಕಾರ್ಯವಲ್ಲ. ಈ ದೇಶದ ಆಚಾರ ವಿಚಾರ, ಮೌಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿ ಅದಕ್ಕಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಯನ್ನು ಚುನಾಯಿಸುವುದಷ್ಟೇ ಕಾರ್ಯಕರ್ತರ ಗುರಿ ಎಂದರು.

ಇದೇ ವೇಳೆ ಶಾಸಕ ಡಿ.ವೇದವ್ಯಾಸ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಪೋರೇಟರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಕಿಲಾ ಕಾವಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಉಪಮೇಯರ್ ಪೂರ್ಣಿಮಾ, ಸುಧೀರ್ ಶೆಟ್ಟಿ ಕಣ್ಣೂರು, ವಿಜಯಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ಕಿಶೋರ್ ಕೊಟ್ಟಾರಿ, ನಿತಿನ್ ಕುಮಾರ್, ಭಾಸ್ಕರಚಂದ್ರ ಶೆಟ್ಟಿ, ರೂಪಾ ಡಿ.ಬಂಗೇರ ಮತ್ತಿತರ ಬಿಜೆಪಿ ಮುಖಂಡರು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು