ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.
ಕಾರ್ಯಕ್ರಮಕ್ಕೂ ಮುನ್ನ ಮಂಗಳೂರಿನ ಸರ್ಕ್ಯೂಟ್ ಹೌಸ್ನಿಂದ ಕದ್ರಿ ಪಾರ್ಕ್ ಗೋರಕ್ಷನಾಥ ಸಭಾಭವನದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮಹಿಳಾ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ನರ್ತಿಸುತ್ತಾ, ಬಿಜೆಪಿಯ ಬೃಹತ್ ಧ್ವಜ ಹಾರಾಡಿಸುತ್ತಾ ಬಂದದ್ದು ವಿಶೇಷವಾಗಿತ್ತು. ಶಾಸಕ ಡಿ.ವೇದವ್ಯಾಸ್ ಕಾಮತ್ ಅವರನ್ನು ತೆರೆದ ವಾಹನದಲ್ಲಿ ಕರೆತರಲಾಯಿತು.
ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಭಾರತೀಯ ಜನತಾ ಪಾಟೀಯ ವಿಚಾರಧಾರೆಗಳನ್ನು ಒಪ್ಪುವಂತಹ ವಾರ್ಡ್ ಇದಾಗಿದೆ. ಕೇವಲ ಒಬ್ಬ ವ್ಯಕ್ತಿಯನ್ನು ಗೆಲ್ಲಿಸುವುದಷ್ಟೇ ಬಿಜೆಪಿ ಕಾರ್ಯಕರ್ತರ ಕಾರ್ಯವಲ್ಲ. ಈ ದೇಶದ ಆಚಾರ ವಿಚಾರ, ಮೌಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿ ಅದಕ್ಕಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಯನ್ನು ಚುನಾಯಿಸುವುದಷ್ಟೇ ಕಾರ್ಯಕರ್ತರ ಗುರಿ ಎಂದರು.
ಇದೇ ವೇಳೆ ಶಾಸಕ ಡಿ.ವೇದವ್ಯಾಸ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಪೋರೇಟರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಕಿಲಾ ಕಾವಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಉಪಮೇಯರ್ ಪೂರ್ಣಿಮಾ, ಸುಧೀರ್ ಶೆಟ್ಟಿ ಕಣ್ಣೂರು, ವಿಜಯಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ಕಿಶೋರ್ ಕೊಟ್ಟಾರಿ, ನಿತಿನ್ ಕುಮಾರ್, ಭಾಸ್ಕರಚಂದ್ರ ಶೆಟ್ಟಿ, ರೂಪಾ ಡಿ.ಬಂಗೇರ ಮತ್ತಿತರ ಬಿಜೆಪಿ ಮುಖಂಡರು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…