News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಕೈಕಂಬದಿಂದ ಬಾಲ ಯೇಸು ಪುಣ್ಯಕ್ಷೇತ್ರದ ವರೆಗೆ ಹೊರೆಕಾಣಿಕೆ ಮೆರವಣಿಗೆ

Mngl
Photo Credit : News Kannada

ಮಂಗಳೂರು:  ಬಾಲ ಯೇಸುವಿನ ಪುಣ್ಯಕ್ಷೇತ್ರ ಕಾರ್ಮೆಲ್ ಹಿಲ್ ಬಿಕರ್ನಕಟ್ಟೆ ಇದ್ರ ವಾರ್ಷಿಕ ಮಹೋತ್ಸವ ಜನವರಿ ೧೪ ರಿಂದ ೧೬ ರ ವರೆಗೆ ನಡೆಯಲಿದ್ದು, ಇದ್ರ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಕುಲಶೇಖರ ಕೈಕಂಬದಿಂದ ಬಾಲ ಯೇಸು ಪುಣ್ಯಕ್ಷೇತ್ರದ ವರೆಗೆ ನೆರವೇರಿತು.

ಹೊರೆ ಕಾಣಿಕೆ ಮೆರವಣಿಗೆಗೆ ಸೈಂಟ್ ಜೋಸೆಫ್ ಮೊನೆಸ್ಟರಿ ಸುಪೀರಿಯರ್ ಫಾ‌. ಚಾರ್ಲ್ಸ್ ಸೆರಾವೊ ಚಾಲನೆ ನೀಡಿದರು. ಬಳಿಕ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಾಮಂಜೂರು ಚರ್ಚ್ ಧರ್ಮ ಗುರು ಫಾ. ಜೇಮ್ಸ್ ಡಿಸೋಜ, ಮನಪಾ ಸದಸ್ಯರಾದ ನವೀನ್ ಡಿಸೋಜ, ಲ್ಯಾನ್ಸ್ ಲೋಟ್ ಪಿಂಟೊ, ಕವ್ಯಾ ನಟರಾಜ್, ಪ್ರವೀಣ್ ಚಂದ್ರ ಆಳ್ವ, ಎಸಿ ವಿನಯ್ ರಾಜ್, ಭಾಸ್ಕರ್ ಮೊಯ್ಲಿ, ಮಾಜಿ ಮನಪಾ ಸದಸ್ಯೆ ಸಬಿತಾ ಮಿಸ್ಕಿತ್, ಬಾಲ ಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕ ಫಾ‌. ರೋವೆಲ್ ಡಿಸೋಜಾ, ನಿರ್ದೇಶಕರಾದ ಫಾ. ಸ್ಟೀಫನ್ ಲೋಬೊ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು