News Karnataka Kannada
Tuesday, May 07 2024
ಮಂಗಳೂರು

ಮಂಗಳೂರು: ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ ಕಾರ್ಯಕ್ರಮಕ್ಕೆ ಶಿವಭಾಗ್ ವಾರ್ಡಿನಲ್ಲಿ ಚಾಲನೆ

Mangaluru: A programme to link Aadhaar with voters' list was launched in Shivabagh ward.
Photo Credit : News Kannada

ಮಂಗಳೂರು: ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ ಯೋಜನೆಯು ಚುನಾವಣಾ ಆಯೋಗವು ಕಡ್ಡಾಯ ಮಾಡಿದ್ದು, ಸುಪ್ರೀಂ ಕೋರ್ಟ್ ಇದು ಕಡ್ಡಾಯವಲ್ಲ ಎಂದು ಹೇಳಿದರೂ, ಈ ಹಿಂದೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಹೇಳಿ, ಈಗ ಕಡ್ಡಾಯ ಮಾಡಲಾಗುತ್ತಿದೆ. ಅಕ್ರಮ ಮತದಾರರ ಪಟ್ಟಿಯನ್ನು ತಪ್ಪಿಸಲು ಲಿಂಕ್ ಯೋಜನೆ ಉಪಯುಕ್ತವಾಗಿದೆ ಮತ್ತು ಹೊಸ ಮತದಾರರ ಸೇರ್ಪಡೆಯನ್ನು ಮನೆಯಲ್ಲಿಯೇ ಕುಳಿತು ಒನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿರುವುದು, ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ನೊಂದಾಯಿಸಲು ಮತ್ತು ಅದರಲ್ಲಿ ಆಗುತ್ತಿರುವ ಅಕ್ರಮವನ್ನು ತಪ್ಪಿಸಲು ಉಪಯುಕ್ತವಾಗಿದೆ ಎಂದು ಮಾಜಿ ಶಾಸಕ ಐವನ್ ಡಿ ಸೋಜರವರು ಶಿವಭಾಗ ವಾರ್ಡಿನಲ್ಲಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ ಮತ್ತು ಸೇರ್ಪಡೆ ಗೊಳಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಬಿರದಲ್ಲಿ ಸುಮಾರು 120ಕ್ಕೂ ಅಧಿಕ ಮಂದಿ ಭಾಗವಹಿಸಿ, ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವುದರ ಜೊತೆಗೆ 50ಕ್ಕೂ ಅಧಿಕ ಮಂದಿ ಹೊಸ ಮತದಾರರು ನೊಂದಾಯಿಸಿಕೊಂಡರು.

ಈ ಕಾರ‍್ಯಕ್ರಮದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಕಾರ್ಪೋರೇಟರ್ ಭಾಸ್ಕರ್ ರೈ, ಅಬಿಬುಲ್ಲ, ರಮಾನಂದ ಪೂಜಾರಿ, ಟಿ.ಕೆ. ಸುಧೀರ್, ನವಾಜ್ ಮಹಕಾಳಿಪಡ್ಪು, ಆಲಿಸ್ಟನ್ ಡಿಕುನ್ಹಾ, ಮೀನಾ ಟೆಲ್ಲಿಸ್, ಪಿಯುಸ್ ಮೊಂತೆರೊ, ಶ್ರೀಮತಿ ಕಿರಣ್ ಜೇಮ್ಸ್, ಮುಂತಾದವರು ಭಾಗವಹಿಸಿದರು. ಪ್ರಾರಂಭದಲ್ಲಿ ಪ್ರವೀಣ್ ಜೇಮ್ಸ್ ರವರು ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು