News Karnataka Kannada
Friday, May 03 2024
ಮಂಗಳೂರು

ಸಂಘನಿಕೇತನದಲ್ಲಿ ನಾಳೆ ಸಮನ್ವಯ ಬೈಠಕ್, ನಳಿನ್‌ ಗೆ ಲೋಕಸಭೆ ನೀಡುವ ಕುರಿತು ಚರ್ಚೆ ಸಾಧ್ಯತೆ

BJP to stage series of protests over failure to implement guarantee scheme
Photo Credit : Facebook

ಮಂಗಳೂರು: ಜೂ.26 ರಂದು ಮಂಗಳೂರಿನಲ್ಲಿ ಸಂಘ ಪರಿವಾರದ ಸಮನ್ವಯ ಬೈಠಕ್ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಹಿಂದೂ ಸಂಘಟಕ ಅರುಣ್ ಕುಮಾರ್ ಪುತ್ತಿಲ ವಿಚಾರ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ. ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಲೋಕಸಭಾ ಟಿಕೆಟ್ ನೀಡುವ ಕುರಿತು ಇದೇ ವೇಳೆ ಮಾತುಕತೆ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಬೈಠಕ್ ನಡೆಯಲಿದ್ದು. ಬೈಠಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.

ಬಿಜೆಪಿ, ಸಂಘಪರಿವಾರ ಹಾಗೂ ಸಂಘಟನೆಗಳ ಸುಮಾರು ನೂರಕ್ಕೂ ಅಧಿಕ ಮಂದಿ ಬೈಠಕ್‌ನಲ್ಲಿ ಪಾಲ್ಗೊಳ್ಳಿದ್ದು, ನಾಳೆ ನಡೆಯುವ ಬೈಠಕ್‌ ಭಾರಿ ಮಹತ್ವ ಪಡೆದುಕೊಂಡಿದೆ. ಪುತ್ತೂರು ಸೇರಿದಂತೆ ಜಿಲ್ಲೆಯ ಬಿಜೆಪಿಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳಬೇಕಾದ ಬಗ್ಗೆ ತೀರ್ಮಾನದ ಬಗ್ಗೆಯೂ ಚರ್ಚೆ ನಡೆಯಲಿದೆ.

ಮುಖ್ಯವಾಗಿ ಪುತ್ತಿಲ ಪರಿವಾರ ಹಾಗೂ ಬ್ರಿಜೇಶ್ ಚೌಟ ವಿಚಾರವಾಗಿ ಚರ್ಚೆಯಾಗುವ ಸಾಧ್ಯತೆ ಇದೆ. ಅದಲ್ಲದೇ ಮತ್ತೆ ನಾಲ್ಕನೇ ಭಾರೀಗೆ ನಳೀನ್ ಕುಮಾರ್ ಗೆ ಟಿಕೆಟ್ ಕೊಡುವ ಬಗ್ಗೆಯೂ ಚರ್ಚೆ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು