ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ದ.ಕ. ವತಿಯಿಂದ ಅಕ್ಟೋಬರ್ 7 ಶುಕ್ರವಾರ ಮಂಗಳೂರು ಪುರಭವನದಲ್ಲಿ ಸರ್ವ ಧರ್ಮೀಯರಿಗಾಗಿ ಸಂಜೆ 7ಗಂಟೆಗೆ ‘ದೇಶದ ಹಿತಚಿಂತನೆ: ಪ್ರವಾದಿ ಮುಹಮ್ಮದ್ (ಸ) ಚಿಂತನೆಗಳ ಬೆಳಕಿನಲ್ಲಿ’ ಎಂಬ ವಿಷಯದಲ್ಲಿ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಕಡೂರಿನ ಮಾಜಿ ಶಾಸಕ ಶ್ರೀ ವೈ.ಎಸ್.ವಿ. ದತ್ತ, ಚಿಂತಕರಾದ ಶ್ರೀ ನಿಕೇತ್ ರಾಜ್ ಮೌರ್ಯ, ಬೆಂಗಳೂರು, ಕುಲಶೇಖರ ಹೋಲಿಕ್ರಾಸ್ ಚರ್ಚ್ನ ಧರ್ಮಗುರುಗಳಾದ ಫಾ, ಕ್ಲಿಫರ್ಡ್ ಫೆರ್ನಾಂಡಿಸ್ ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಜ| ಮುಹಮ್ಮದ್ ಕುಂಞಯವರು ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಜ.ಇ. ಹಿಂದ್ ರಾಜ್ಯಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಳಗಾಮಿ ವಹಿಸಲಿದ್ದಾರೆ.