News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಮತದಾರರ ಗುರುತುಚೀಟಿಗೆ ಆಧಾರ್ ಲಿಂಕ್ ಶಿಬಿರ

Aadhaar linking camp for inclusion of names in voters' list and voter ID cards
Photo Credit : By Author

ಮಂಗಳೂರು:  ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರ ಮುಂದಾಳತ್ವದಲ್ಲಿ, ಅಗೋಸ್ಟ್ 23ರಂದು ಮಂಗಳವಾರ ಬೆಳಿಗ್ಗೆ 10.30ರಿಂದ ಸಂಜೆ 4.00ಗಂಟೆಯವರೆಗೆ ಮಂಗಳೂರು ಸ್ಟೋರ್ಸ್  ಸಭಾಭವನದಲ್ಲಿ 203 ದಕ್ಷಿಣ ವಿಧಾನ ಸಭಾ ಕ್ಷೇತ್ರದ ವಾರ್ಡ್‍ಗಳಾದ ಅತ್ತಾವರ, ಫಳ್ನೀರ್, ಜಪ್ಪು, ಮಂಗಳಾದೇವಿ ಮತ್ತು ಬೋಳಾರ ಪರಿಸರದಲ್ಲಿರುವ ಮತದಾರರ ಸೇರ್ಪಡೆ, ಮತದಾರರ ಗುರುತುಚೀಟಿಗೆ ಆಧಾರ್ ಲಿಂಕ್ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದರ ಉದ್ಘಾಟನೆಯನ್ನ್ನು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಲೀಂ ಇವರು ನೆರವೇರಿಸಲಿರುವರು. ಸಮಾರಂಭದಲ್ಲಿ ಮಾಜಿ ಕಾರ್ಪೊರೇಟರ್ ಭಾಸ್ಕರ್ ರಾವ್, ವಾರ್ಡಿನ ಅಧ್ಯಕ್ಷರು ಮತ್ತು ಬೂತ್ ಅಧ್ಯಕ್ಷರುಗಳು ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಮನೆಯಲ್ಲಿಯೇ ಇದ್ದು ಲಿಂಕ್ ಮಾಡುವ ವಿಧಾನದ ಬಗ್ಗೆ ಕಾರ್ಯಕ್ರಮದಲ್ಲಿ ವಿವರಣೆಗಳನ್ನು ನೀಡಲಾಗುವುದು.

ಶಿಬಿರದಲ್ಲಿ ಭಾಗವಹಿಸಿ ಹೊಸ ಮತದಾರರ ಸೇರ್ಪಡೆ ಮತ್ತು ಆಧಾರ್ ಅಥವಾ ಇನ್ನಿತರ 11 ದಾಖಲೆಗಳಿಗೆ ಲಿಂಕ್ ಮಾಡುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀ ಐವನ್ ಡಿ ಸೋಜರವರು ಮತದಾರರಲ್ಲಿ ವಿನಂತಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು