ಮಂಗಳೂರು: ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಹಲವು ಕಾಲೇಜಿನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವವರಿಗೆ ಪ್ರಥಮ ವರ್ಷದ ಸರ್ಟಿಫಿಕೇಟ್ ಕೂಡ ಸಿಕ್ಕಿಲ್ಲ. ಕಾಲೇಜ್ ಮುಗಿದವರಿಗೂ ಅಂಕಪಟ್ಟಿ ಪ್ರತಿ ಸಿಕ್ಕಿಲ್ಲ ಅದೇ ರೀತಿ ಯುಯುಸಿಎಂಎಸ್ ತಂತ್ರಾಂಶದ ಲೋಪ ದೋಷದಿಂದ ವಿದ್ಯಾರ್ಥಿಗಳು ಗೊಂದಲದಿಂದ ಇದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.