Categories: ಮಂಗಳೂರು

ಮಂಗಳೂರು: ಯೇನೆಪೋಯ ವಿಶ್ವವಿದ್ಯಾಲಯ ಮತ್ತು ಸಾನಿಧ್ಯ ಸ್ಕೂಲ್ ನಡುವೆ ಶೈಕ್ಷಣಿಕ ಒಪ್ಪಂದ

ಮಂಗಳೂರು: ಯೇನೆಪೋಯ ವಿಶ್ವವಿದ್ಯಾಲಯವು ಮಂಗಳೂರಿನಲ್ಲಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ಪ್ರಸಿದ್ಧ ಶಾಲೆಯಾದ ಸಾನಿಧ್ಯ ಸ್ಕೂಲ್ ಫಾರ್ ದ ಮೆಂಟಲ್ ಚಾಲೆಂಜ್ಡ್ ನೊಂದಿಗೆ ತಿಳುವಳಿಕಾ ಒಡಂಬಡಿಕೆ ಮಾಡಿಕೊಂಡಿದೆ. ಯೆನೆಪೋಯ ವಿಶ್ವವಿದ್ಯಾಲಯದ ವಿಶೇಷ ಶಿಕ್ಷಣ ವಿದ್ಯಾರ್ಥಿಗಳಿಗೆ ಸನಿಧ್ಯ ಶಾಲೆಯಲ್ಲಿ ಪ್ರಾಯೋಗಿಕ ತರಬೇತಿ ನೀಡುವ ಗುರಿಯನ್ನು ಈ ತಿಳಿವಳಿಕೆ ಒಪ್ಪಂದ ಹೊಂದಿದೆ.

ಈ ತಿಳಿವಳಿಕೆ ಒಪ್ಪಂದದ ಅಡಿಯಲ್ಲಿ ಯೆನೆಪೋಯ ವಿಶ್ವವಿದ್ಯಾಲಯವು ಸಾನಿಧ್ಯ ಶಾಲೆಯೊಂದಿಗೆ ಸಹಕರಿಸಿ ವಿಶೇಷ ಶಿಕ್ಷಣದಲ್ಲಿ ತಮ್ಮ ಕೋರ್ಸ್ ಗಳಿಗೆ ಪ್ರಾಯೋಗಿಕ ತರಬೇತಿ ನೀಡಲಿದೆ.

ಈ ಸಹಭಾಗಿತ್ವವು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ  ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.  ಇದು ವಿಶೇಷ ಅಗತ್ಯವಿರುವ ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಸಂಸ್ಥೆಯ ಬದ್ಧತೆಯ ಧ್ಯೋತಕವಾಗಿದೆ.

ಪ್ರಾಯೋಗಿಕ ತರಬೇತಿ ಅವಕಾಶಗಳನ್ನು ಒದಗಿಸುವುದರ ಜೊತೆಗೆ, ವಿಶೇಷ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಂಟಿ ಸಮ್ಮೇಳನಗಳು, ಸೆಮಿನಾರ್ ಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸುವ ಯೋಜನೆಗಳನ್ನು ಸಹ ಈ ತಿಳಿವಳಿಕೆ ಒಪ್ಪಂದ ಒಳಗೊಂಡಿದೆ. ಈ ಕಾರ್ಯಕ್ರಮಗಳು ಎರಡೂ ಸಂಸ್ಥೆಗಳ ತಜ್ಞರು ವಿಚಾರಗಳನ್ನು ವಿನಿಮಯ ಮಾಡಿಕೊಿಳ್ಳಲು ಅವಕಾಶ ನೀಡುತ್ತದೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

10 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

26 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

38 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

54 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago