News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಚುನಾವಣಾ ಕಾರ್ಯ, ಜವಬ್ದಾರಿಯುತವಾಗಿ ನಿರ್ವಹಿಸಲು ಸಲಹೆ

Advice to conduct election duty in a responsible manner
Photo Credit : News Kannada

ಮಂಗಳೂರು: ಚುನಾವಣಾ ಕಾರ್ಯದಲ್ಲಿ ಭಾವನಾತ್ಮಕತೆಗೆ ಅವಕಾಶವಿಲ್ಲ, ಜವಾಬ್ದಾರಿಯು ಕೆಲಸಕ್ಕೆ ಮಾತ್ರ ಆದ್ಯತೆ, ಆದ ಕಾರಣ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗುವುದೇ ಹೆಮ್ಮೆಯ ವಿಚಾರ ಎಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅಭಿಪ್ರಾಯಪಟ್ಟರು.

ಅವರು ಮಾ. 30ರ ಗುರುವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಚುನಾವಣೆಯ ಪೂರ್ವಸಿದ್ದತೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

ಈ ಹಿಂದೆ ಸಾಕಷ್ಟು ಚುನಾವಣಾ ಕಾರ್ಯ ನಿರ್ವಹಿಸಿದ್ದರು, ಸಾಕಷ್ಟು ಅನುಭವವಿದ್ದರೂ ಸಹ ಪ್ರತಿಯೊಂದು ಚುನಾವಣೆಯು ಹೊಸತಾಗಿರುತ್ತದೆ, ಅಲ್ಲಿ ಸಾಕಷ್ಟು ಹೊಸ ಸಂಗತಿಗಳಿರುತ್ತವೆ, ಚುನಾವಣಾ ಆಯೋಗದಿಂದ ಬರುವ ನಿರ್ದೇಶನಗಳು, ಕೆಲವೊಂದು ಘಟನೆಗಳು ವಿಭಿನ್ನವಾಗಿರುತ್ತದೆ ಅದನ್ನು ಅರಿತು ಮುಂದಿನ 45 ದಿನದೊಳಗೆ ವಾರಿಯರ್ ರೀತಿ ಕೆಲಸ ಮಾಡಬೇಕು. ಆತಂಕ, ಭಯ ರಹಿತವಾಗಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಪ್ರತಿಯೊಬ್ಬರು ಸಜ್ಜಾಗಬೇಕು ಎಂದವರು ತಿಳಿಸಿದರು.

ಚುನಾವಣಾ ಕಾರ್ಯದಲ್ಲಿ ಜ್ಞಾನವೇ ಆಯುಧ. ಆದ ಕಾರಣ ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಓದಿಕೊಳ್ಳಬೇಕು ಹಾಗೂ ಆ ರೀತಿ ಕಾರ್ಯನಿರ್ವಹಿಸಬೇಕು. ಅದರಂತೆ ಚುನಾವಣೆ ಘೋಷಣೆಯಾದ  ಬಳಿಕ ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ, ಅದರಂತೆ ಪ್ರತಿಯೊಬ್ಬರು ಆಯಾ ತಾಸುಗಳ ಗಡುವನ್ನು ಕಾಯದೆಯೇ ಕೂಡಲೇ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.

ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು