ಮಂಗಳೂರು, ಆ. 14(ಕ.ವಾ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ಕುದ್ಮುಲ್ ರಂಗರಾವ್ ಪುರಭವನ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಆ. 14 ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಅಮರಕ್ರಾಂತಿ – 1837 ಸ್ವಾತಂತ್ರ್ಯ ಹೋರಾಟ ಎಂಬ ನಾಟಕ ಹಾಗೂ ಕುದ್ರೋಳಿ ಗಣೇಶ್ ಅವರ ರಾಷ್ಟ್ರಭಕ್ತಿ ಸಾರುವ ಜಾದೂ ಕಾರ್ಯಕ್ರಮಕ್ಕೆ ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಗಣ್ಯರು ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಕಲಾವಿದರು, ನೂರಾರು ಸಂಖ್ಯೆಯ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.