ಮಂಗಳೂರು: ನಗರದ ಕ್ರೀಡಾಳುಗಳಿಗೆ ಪೂರಕವಾಗುವಂತೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ, ಈಜುಕೊಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕೆನ್ನುವ ಚಿಂತನೆಯೊಂದಿಗೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಶಾಸಕನಾದ ಪ್ರಾರಂಭದಲ್ಲಿ ನಗರದ ಏಕೈಕ ಶೆಟಲ್ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣದ ಅವ್ಯವಸ್ಥೆಯನ್ನು ಮನಗಂಡು ಮೇಲ್ಛಾವಣಿ ದುರಸ್ತಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.
ಉರ್ವ ಪರಿಸರದಲ್ಲಿ 22 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣದಲ್ಲಿಯೂ ಶೆಟಲ್ – ಬ್ಯಾಡ್ಮಿಂಟನ್ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಂಡು ಕ್ರೀಡಾ ಸಂಕೀರ್ಣದ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಪಾಲಿಕೆ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಲೀಲಾವತಿ ಪ್ರಕಾಶ್, ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಮುಖಂಡರಾದ ಗೋಕುಲ್ ದಾಸ್ ಭಟ್, ಮೋಹನ್ ಆಚಾರ್, ಮೋಹನ್ ಪೂಜಾರಿ, ವಸಂತ್ ಶೇಟ್, ಶ್ರೀನಿವಾಸ್ ಶೇಟ್, ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಅಧಿಕಾರಿ ರವಿ, ಬ್ಯಾಡ್ಮಿಂಟನ್ ಅಸೋಸಿಯೇಷನ್ ಪ್ರಮುಖರಾದ ಶ್ರೀನಿವಾಸ ಬಾಳಿಗಾ, ಗುರುಪ್ರಸಾದ್ ಪೈ, ಚಂದ್ರಕಾಂತ ಶೆಣೈ, ರಾಜ್ ಪತ್ರರಾವ್, ಎ ಎಸ್ ವೆಂಕಟೇಶ್, ಸುರೇಶ್ ಕುಮಾರ್, ಕುಮಾರದಾಸ್ ಶೆಣೈ, ಅಬ್ದುಲ್ ಸಮದ್, ಸುಪ್ರಿತ್ ಆಳ್ವ, ವೆಲೆರಿಯನ್ ಲೋಬೋ, ಸಂತೋಸ್ ಕುಮಾರ್ ಶೆಟ್ಟಿ, ಶೈಲೇಶ್ ಮಲ್ಯ, ವಿಶ್ವನಾಥ ಪೈ, ಗಣೇಶ್ ರಾವ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.