News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಎ.ಶಿವಾನಂದ ಕರ್ಕೇರ ಸಂಸ್ಮರಣಾ ಪ್ರಶಸ್ತಿಗೆ ಆನಂದ ಬಂಗೇರ ಅರ್ಕುಳ ಆಯ್ಕೆ

Mangaluru: Anand Bangera Arkula selected for A Shivananda Karkera Memorial Award
Photo Credit : News Kannada

ಮಂಗಳೂರು: ತುಳುನಾಡಿನ ನಾಟಕಕಾರ, ಸಾಹಿತಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ದಿ.ಎ.ಶಿವಾನಂದ ಕರ್ಕೇರ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಅ.7ರಂದು ಬೆಳಿಗ್ಗೆ 10ರಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿಚಾವಡಿಯಲ್ಲಿ ಆಯೋಜಿಸಲಾಗಿದೆ.

ಬೆಳಿಗ್ಗೆ 10 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಕ್ಕೆ ಸರಿಯಾಗಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ದಿ. ಶಿವಾನಂದ ಕರ್ಕೇರ ರವರ ಧರ್ಮಪತ್ನಿ ಪ್ರಪುಲ್ಲ ಶಿವಾನಂದ ಕರ್ಕೇರ ಅವರು ಉದ್ಘಾಟಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಶ್ರೀ ದಯಾನಂದ ಜಿ. ಕತ್ತಲ್‌ಸಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ವಿ.ಜಿ ಪಾಲ್ ರವರು ಸಂಸ್ಮರಣಾ ನುಡಿಯನ್ನು ನುಡಿಯಲಿದ್ದಾರೆ. ಎ.ಶಿವಾನಂದ ಕರ್ಕೇರ ಸಂಸ್ಮರಣಾ ಪ್ರಶಸ್ತಿಯನ್ನು ಜನಪದ ಸಿರಿ ಸಿಂಗಾರದ ಕಲಾವಿದ  ಆನಂದ ಬಂಗೇರ ಅರ್ಕುಳ ರವರಿಗೆ ನೀಡಿ ಗೌರವಿಸಲಾಗುವುದು. ಮಹಾನಗರ ಪಾಲಿಕೆಯ ನೂತನ ಮೇಯರ್ ಜಯಾನಂದ ಅಂಚನ್ ಮತ್ತು ಮುಜರಾಯಿ ದತ್ತಿ ಇಲಾಖೆಯ ಸಹಾಯಕ ಕಮಿಷನರ್ ಶ್ರೀ ಗುರುಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಾಲ ಪ್ರತಿಭೆಗಳಿಗೆ ವಿಶೇಷ ಗೌರವಾರ್ಪಣೆ ನಡೆಯಲಿದೆ ಎಂದು ಕಾರ್ಯಕ್ರಮದ ಸದಸ್ಯ ಸಂಚಾಲನ ಶ್ರೀ ನರೇಂದ್ರ ಕೆರೆಕಾಡು ಹಾಗೂ ರಿಜಿಸ್ಟ್ರಾರ್ ಕವಿತಾ ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು