ಮಂಗಳೂರು: ತುಳುನಾಡಿನ ನಾಟಕಕಾರ, ಸಾಹಿತಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ದಿ.ಎ.ಶಿವಾನಂದ ಕರ್ಕೇರ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಅ.7ರಂದು ಬೆಳಿಗ್ಗೆ 10ರಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿಚಾವಡಿಯಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಕ್ಕೆ ಸರಿಯಾಗಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ದಿ. ಶಿವಾನಂದ ಕರ್ಕೇರ ರವರ ಧರ್ಮಪತ್ನಿ ಪ್ರಪುಲ್ಲ ಶಿವಾನಂದ ಕರ್ಕೇರ ಅವರು ಉದ್ಘಾಟಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಶ್ರೀ ದಯಾನಂದ ಜಿ. ಕತ್ತಲ್ಸಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ವಿ.ಜಿ ಪಾಲ್ ರವರು ಸಂಸ್ಮರಣಾ ನುಡಿಯನ್ನು ನುಡಿಯಲಿದ್ದಾರೆ. ಎ.ಶಿವಾನಂದ ಕರ್ಕೇರ ಸಂಸ್ಮರಣಾ ಪ್ರಶಸ್ತಿಯನ್ನು ಜನಪದ ಸಿರಿ ಸಿಂಗಾರದ ಕಲಾವಿದ ಆನಂದ ಬಂಗೇರ ಅರ್ಕುಳ ರವರಿಗೆ ನೀಡಿ ಗೌರವಿಸಲಾಗುವುದು. ಮಹಾನಗರ ಪಾಲಿಕೆಯ ನೂತನ ಮೇಯರ್ ಜಯಾನಂದ ಅಂಚನ್ ಮತ್ತು ಮುಜರಾಯಿ ದತ್ತಿ ಇಲಾಖೆಯ ಸಹಾಯಕ ಕಮಿಷನರ್ ಶ್ರೀ ಗುರುಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಾಲ ಪ್ರತಿಭೆಗಳಿಗೆ ವಿಶೇಷ ಗೌರವಾರ್ಪಣೆ ನಡೆಯಲಿದೆ ಎಂದು ಕಾರ್ಯಕ್ರಮದ ಸದಸ್ಯ ಸಂಚಾಲನ ಶ್ರೀ ನರೇಂದ್ರ ಕೆರೆಕಾಡು ಹಾಗೂ ರಿಜಿಸ್ಟ್ರಾರ್ ಕವಿತಾ ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…