ಮಂಗಳೂರು: ಕಳೆದ 23ವರ್ಷಗಳಿಂದ ಪೊಲೀಸ್ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಯು.ಎಂ.ಬಶೀರ್(51) ಬಂಧಿತ ಆರೋಪಿ. 2000ರ ಡಿಸೆಂಬರ್ 17ರಂದು ರಾತ್ರಿ 8:45ರ ಸುಮಾರಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಚೂರಿ ತೋರಿಸಿ ಕತ್ತಿಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ. ಈ ಪ್ರಕರಣಕ್ಕೆ ಸಂಬಂದಿಸಿದಂತೆ, ಉರ್ವ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈತನ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆದರೆ ಆರೋಪಿ ಯು.ಎಂ.ಬಶೀರ್ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದರೆ ಬುಧವಾರ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.