ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಅಪರಿಚಿತ ಸ್ಕಾರ್ಪಿಯೋ ಕಾರೊಂದು ಹಿಂಬಾಲಿಸಿ, ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ ಎಂಬಲ್ಲಿ ಅ. 13 ರಂದು ರಾತ್ರಿ 11:30ಕ್ಕೆ ನಡೆದಿದೆ.
ಶಾಸಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಅವ್ಯಾಚವಾಗಿ ಬೈದು ಕೊಲೆಗ ಮಾಡಲು ಯತ್ನಿಸಿದ ಕೃತ್ಯವು ಇಡೀ ಜಿಲ್ಲೆಯ ಜನತೆಯನ್ನು ಭಯಭೀತಿಗೊಳಿಸಿದೆ. ಶಾಸಕರನ್ನ ಅಡ್ಡಗಟ್ಟಿ ಮಾರಕಾಸ್ತ್ರ ಝಲಪಿಸಿ ಕೊಲೆಗೆ ಯತ್ನಿಸಿದ ಕೃತ್ಯವು ಇದೊಂದು ಭಯೋತ್ಪಾದಕ ಕೃತ್ಯ.
ತಕ್ಷಣ ಈ ಕೃತ್ಯ ಮಾಡಿದವರನ್ನು ಬಂಧಿಸಿ ಕುಲಂಕುಶವಾಗಿ ತನಿಖೆ ಮಾಡಿ ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.