ಮಂಗಳೂರು: ವಿಧಾಸಭೆ
ವಿಧಾನಸಭೆ ಚುಣಾವಣೆ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಈ ನಿಟ್ಟಿನಲ್ಲಿ ಕೆಲ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ. ಮಾ.29ರಿಂದ ಮೇ 15ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ.
ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದವಿಧಾನಸಭಾ ಕ್ಷೇತ್ರವಾರು ವಿವಿಧ ತಂಡಗಳನ್ನು ರಚಿಸಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ನೀಡುವುದು ಹಾಗೂ ಚುನಾವಣಾ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಕಡ್ಡಾಯ.
ಸಾರ್ವಜನಿಕರು 50 ಸಾವಿರ ರೂ.ಗಳಿಗಿಂತ ಹೆಚ್ಚು ಹಣ ಕೊಂಡೊಯ್ಯುವ ಸಂದರ್ಭ ಪೂರಕ ದಾಖಲೆಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಲಿಕ್ಕರ್ ಮತ್ತು ಯಾವುದೇ ರೀತಿಯ ಉಡುಗೊರೆ ಸಾಮಾಗ್ರಿಗಳ ಮೊತ್ತವು 10 ಸಾವಿರ ರೂ.ಗಳಿಗಿಂತ ಹೆಚ್ಚಿನ ಮೌಲ್ಯದ್ದಾಗಿದ್ದಲ್ಲಿ ವಶಕ್ಕೆ ಪಡೆಯಲಾಗುವುದು ಹಾಗೂ ದಾಖಲೆ ಸಹಿತ 10 ಲಕ್ಷಕ್ಕಿಂತ ಹೆಚ್ಚು ಮೊಬಲಗನ್ನು ಸಾಗಿಸುತ್ತಿದ್ದಲ್ಲಿ ಪ್ರಕರಣವನ್ನು ಮುಂದಿನ ತನಿಖೆಗೆ ಆದಾಯ ತೆರೆಗೆ ಇಲಾಖೆಯ ಸುಪರ್ದಿಗೆ ನೀಡಲಾಗುವುದು, ಈ ಅವಧಿಯಲ್ಲಿ ಯಾವುದೇ ಅನುಮಾನಸ್ಪದ ಹಣವನ್ನು ವಶಪಡಿಸಿಕೊಂಡಿದ್ದಲ್ಲಿ ನಿಖರತೆ ಬಗ್ಗೆ ಪರಾಮರ್ಶಿಸಿ, ತುರ್ತಾಗಿ ತೀರ್ಮಾನಿಸಲು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿಚಾರಣ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.