News Karnataka Kannada
Thursday, May 09 2024
ಮಂಗಳೂರು

ಮಂಗಳೂರು ಆಟೋ ರಿಕ್ಷಾ ಸ್ಫೋಟ: ಆರೋಪಿ ಗುಣಮುಖನಾದ ಬಳಿಕ ಕಸ್ಟಡಿಗೆ ಪಡೆದು ವಿಚಾರಣೆ

Mangaluru auto-rickshaw blast: Accused taken into custody after recovery
Photo Credit : R Bhat

ಮಂಗಳೂರು, ನ.21: ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಪ್ರಯಾಣಿಕನ ಗುರುತನ್ನು ಎಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದು, ಈತ ಮಂಗಳೂರಿನ ಗೋಡೆ ಬರಹ ಮತ್ತು ಶಿವಮೊಗ್ಗದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಶಾರೀಕ್ ಎಂದು ಹೇಳಿದ್ದಾರೆ.

ಶಾರಿಕ್​ ಸಂಬಂಧಿಕರು ಬಂದು ಗುರುತು ಪತ್ತೆ ಹಚ್ಚಿದ್ದಾರೆ. ಈತ ಮೋಹನ್​ ಕುಮಾರ್​ ಎಂಬುವರ ಮನೆಯಲ್ಲಿ ವಾಸವಿದ್ದ. ಈತ ವಾಸವಿದ್ದ ಮನೆಯಲ್ಲಿ ಹಲವು ಸ್ಫೋಟಕ ವಸ್ತುಗಳು ಸಿಕ್ಕಿವೆ. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ಫೇಕ್ ಐಡಿ ಪಡೆದು ಕೊಯಮತ್ತೂರಲ್ಲೂ ವಾಸವಿದ್ದ ಎಂದು ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ತೀರ್ಥಹಳ್ಳಿ ಮೂಲದ ಅರಾಫತ್ ಅಲಿ, ಅಬ್ದುಲ್ ಮತೀನ್ ಜೊತೆಗೆ ಶಾರೀಕ್ ಸಂಪರ್ಕ ಹೊಂದಿದ್ದ, ಸದ್ಯ ಅರಾಫತ್ ಮತ್ತು ಅಬ್ದುಲ್ ಮತೀನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರು ಐಸಿಸ್ ನೆಟ್ವರ್ಕ್ ಹೊಂದಿರುವವರಾಗಿದ್ದು ಇವರ ಪ್ರೇರಣೆಯಿಂದ ಕೃತ್ಯ ಸಾಧ್ಯತೆ ಇದೆ ಎಂದು ಹೇಳಿದರು.

ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲಾ ಸುತ್ತಾಡಿ ಮೈಸೂರು ಬಂದಿದ್ದ. ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡ್ತಿದ್ದ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ.

ಫಂಡಿಂಗ್ ಮಾಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದೇವೆ. ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು