ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಭಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿ, ತಡರಾತ್ರಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಿನ್ನೆ ಸುಮಾರು 12 ಗಂಟೆಗೆ ನಡೆದಿದೆ.
ಮುಸ್ಲಿಂ ಯುವಕನ ಜೊತೆ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಕೊಟ್ಟಾರ ಬಳಿ ತಡೆದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಹೋಟೆಲ್ ಗೆ ಊಟಕ್ಕೆ ಬಂದಿರುವುದಾಗಿ ಹೇಳಿಕೊಂಡ ಜೋಡಿಗಳಿಗೆ ಮಧ್ಯರಾತ್ರಿ ಯಾವ ಹೋಟೆಲ್ ತೆರೆದಿರುತ್ತದೆ ಎಂದು ಹೇಳಿ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಪೊಲೀಸರು ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದ್ದು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.