ಮಂಗಳೂರು: ಸದ್ಯ ಕೋಮು ಸಂಘರ್ಷದ ಬೆಂಕಿಯಲ್ಲಿ ಬಿದ್ದು ಹತ್ಯೆಗಳ ನಡುವೆ ಬೂದಿ ಮುಚ್ಚಿದ ಕೆಂಡದಂತಿರುವ ಕರಾವಳಿಯ ಪಾಲಿಗೆ ಸದ್ಯ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಮಂದಿರ ಸೌಹಾರ್ದತೆಯ ಪಾಠ ಮಾಡ್ತಿದೆ. ಇತಿಹಾಸ ಪ್ರಸಿದ್ಧವಾಗಿರುವ ಕ್ರೈಸ್ತರ ಧಾರ್ಮಿಕ ತಾಣ ಬಾಲ ಯೇಸು ಮಂದಿರ ಈ ಭಾಗದ ಸರ್ವಧರ್ಮದ ಜನರ ಆರಾಧನಾ ಕೇಂದ್ರ. ಹೀಗಾಗಿಯೇ ಇಲ್ಲಿ ಒಂಭತ್ತು ದಿನಗಳ ಕಾಲ ನಡೆಯೋ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಜಾತಿ-ಧರ್ಮದ ಹಂಗಿಲ್ಲದೇ ಕರಾವಳಿಯ ಜೊತೆಗೆ ರಾಜ್ಯದ ನಾನಾ ಭಾಗದ ಲಕ್ಷಾಂತರ ಭಕ್ತರು ಆಗಮಿಸ್ತಾರೆ.
ಇಲ್ಲಿ ನೆಲೆನಿಂತಿರೋ ಬಾಲಯೇಸು ಪವಾಡಗಳನ್ನು ನಡೆಸುವ ಮೂಲಕ ಲಕ್ಷಾಂತರ ಜನರ ಬದುಕಲ್ಲಿ ಬೆಳಕು ಮೂಡಿಸಿದ್ದಾನೆ ಅನ್ನೋದು ಸರ್ವಧರ್ಮದ ಭಕ್ತರ ನಂಬಿಕೆ. ಹೀಗಾಗಿ ಒಳಿತನ್ನು ಕಂಡು ಎಲ್ಲಾ ಧರ್ಮಿಯರು ವಾರ್ಷಿಕ ಜಾತ್ರೆಯ ಆ ಒಂಬತ್ತು ದಿನಗಳ ಕಾಲ ಕ್ಷೇತ್ರಕ್ಕೆ ಆಗಮಿಸ್ತಾರೆ. ಇಲ್ಲಿನ ಬಾಲಯೇಸುವಿಗೆ ಪೂಜೆ ಸಲ್ಲಿಸಿ ಕೃತಾರ್ಥರಾಗ್ತಾರೆ.
ಇಲ್ಲಿಗೆ ಬರೋ ಅನ್ಯಧರ್ಮದ ಭಕ್ತರಿಗೆ ಇಲ್ಲಿ ಧರ್ಮದ ವಿಚಾರದಲ್ಲಿ ಗೊಂದಲಗಳೇ ಇಲ್ಲ. ಎಲ್ಲ ಧರ್ಮದವ್ರು ದೆವ್ರನ್ನ ಆರಾಧಿಸೋ ಮೂಲಕ ಭಾವುಕರಾಗ್ತಾರೆ. ಹೀಗಾಗಿಯೇ ಇಡೀ ಕರಾವಳಿಯಲ್ಲೇ ಅನ್ಯಧರ್ಮೀಯರು ಅತೀ ಹೆಚ್ಚು ಆರಾಧಿಸೋ ಕ್ರೈಸ್ತ ಧಾರ್ಮಿಕ ಕೇಂದ್ರವಾಗಿ ಈ ಬಾಲ ಯೇಸು ಮಂದಿರ ಎದ್ದು ನಿಂತಿದೆ. ಸಂಜೆ 6 ಗಂಟೆಯಿಂದ ಆರಂಭವಾಗಿ ಸಂಜೆ 7 ರವರೆಗೆ ಕೊಂಕಣಿ, ಇಂಗ್ಲಿಷ್, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರಂತರವಾಗಿ ಪೂಜಾವಿಧಿಗಳು ನಡೆಯಿತು.
ಇನ್ನೂ ಪ್ರಮುಖ ಬಲಿಪೂಜೆಯೂ ತೆರೆದ ಮೈದಾನದಲ್ಲಿ ಅರ್ಪಿಸಲಾಯಿತು. ಕೋಮು ಸಂಘರ್ಷದ ಬಿರುಗಾಳಿಗೆ ಸಿಲುಕಿ ತತ್ತರಿಸಿರುವ ಕರಾವಳಿಯಲ್ಲಿ ಈ ಪವಿತ್ರ ಪುಣ್ಯ ಕ್ಷೇತ್ರ ಸೌಹಾರ್ದತೆಯ ಪಾಠ ಮಾಡುತ್ತಿರುವುದು ನಿಜಕ್ಕೂ ಮಾದರಿ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…