News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆ

Mangaluru: Bhoomi Pujan of Sri Jagajyothi Basaveshwara Community Hall
Photo Credit : News Kannada

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣದ ಕುರಿತು ಈ ಹಿಂದೆ ಸಮುದಾಯದ ಮುಖಂಡರಿಗೆ ನೀಡಿದ್ದ ಭರವಸೆಯಂತೆ 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಾನ್ಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ಸಹಕಾರದೊಂದಿಗೆ ಸರಕಾರದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

ಮುಂಬರುವ ದಿನಗಳಲ್ಲಿ ಸಮುದಾಯ ಭವನವು ಸಮಾಜದ ಬಂಧುಗಳ ಉಪಯೋಗಕ್ಕಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಾ. ಜಯಪ್ಪ, ಉಪಾಧ್ಯಕ್ಷ ಚನ್ನ ಬಸಪ್ಪ ರೊಟ್ಟಿ, ಪ್ರಧಾನ ಕಾರ್ಯದರ್ಶಿ ವಿವೇಕ್ ಶೆಟ್ಟರ್, ಜೊತೆ ಕಾರ್ಯದರ್ಶಿ ಸುನಂದಾ, ಎಚ್ ಎಸ್ ಗುರುಮೂರ್ತಿ, ಪ್ರದೀಪ್ ಜೆ.ಬಿ, ರುದ್ರಪ್ಪ, ರೂಪಾ ಮಲ್ಲಿಕಾರ್ಜುನ, ತೋಟೇ ಗೌಡ್ರು, ಮಂಗಳ, ಕವಿತಾ ಮುರುಗೇಶ್, ರಾಜೇಂದ್ರಪ್ಪ, ವೀರಣ್ಣ, ಧರ್ಮರಾಜ್, ಸುಷ್ಮಾ, ಲತಾ ಪ್ರಸನ್ನ, ಶಿವಪ್ಪ, ಶಿವಪ್ರಕಾಶ್, ಬಸವರಾಜ್, ಜೀವನ್, ಕರಿ ಬಸಪ್ಪ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು