News Karnataka Kannada
Sunday, April 28 2024
ಮಂಗಳೂರು

ಮಲ್ಲಿಗೆ ನಾಡಿನ ಅಧಿಪತಿ ಯಾರು: ಕಾಂಗ್ರೆಸ್‌ಗೆ ಸೊರಕೆ, ಬಿಜೆಪಿ ಗೊಂದಲದ ಗೂಡು

Belthangady assembly constituency: Rakshit from Congress, Harish Poonja from BJP
Photo Credit : News Kannada

ಮಂಗಳೂರು: ಶಂಕರಪುರ ಮಲ್ಲಿಗೆ ಕೃಷಿಗೆ ಹೆಸರಾದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವರ್ಸ್‌ಸ್‌ ಕಾಂಗ್ರೆಸ್‌ ನೇರ ಹಣಾಹಣಿ ಇದೆ. 2013ರ ಚುನಾವಣೆಯಲ್ಲಿ ಬಿಜೆಪಿಯು ಲಾಲಾಜಿ ಮೆಂಡನ್ ವಿರುದ್ಧ ಕಾಂಗ್ರೆಸ್‌ನ ವಿನಯ್‌ ಕುಮಾರ್ ಸೊರಕೆ 1,855 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರೆ, 2018ರಲ್ಲಿ ವಿನಯ ಕುಮಾರ್ ಸೊರಕೆ ವಿರುದ್ಧ ಲಾಲಾಜಿ ಆರ್.‌ ಮೆಂಡನ್ 11,917 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಆಂತರಿಕ ಸಮೀಕ್ಷೆ ಆತಂಕ ನಡುವೆ ಗುರ್ಮೆ ಸುರೇಶ್‌ ಶೆಟ್ಟಿ, ಯಶಪಾಲ್‌ ಲಾಬಿ: ಹಾಲಿ ಶಾಸಕ ಲಾಲಾಜಿ ಮೆಂಡನ್‌ ಅಭಿವೃದ್ಧಿ ಕಾರ್ಯದ ಹೊರತಾಗಿಯೂ ಬಿಜೆಪಿ ಆಂತರಿಕ ಸರ್ವೆಯಲ್ಲಿ ಕೆಲ ನಕಾರಾತ್ಮಕ ಅಂಶಗಳು ಇರುವುದು ಸತ್ಯ. ಈ ಬಗ್ಗೆ ಪಕ್ಷದ ವರಿಷ್ಠರು ಚಿಂತೆಗೀಡಾಗಿದ್ದು, ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿಯ ಕೆಲಕ್ಷೇತ್ರಗಳಂತೆ ಇಲ್ಲಿಯೂ ಹೊಸ ಅಭ್ಯರ್ಥಿಗೆ ಮಣೆ ಹಾಕುವ ಚಿಂತನೆಯೂ ಇದೆ. ಹಾಲಿ ಶಾಸಕ ಲಾಲಾಜಿ ಆರ್.‌ ಮೆಂಡನ್‌ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ಇಬ್ಬರು ಪ್ರಮುಖ ನಾಯಕರು, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಬಿಜೆಪಿ ಹಿಂದುಳಿದ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ. ಪ್ರಖರ ಹಿಂದು ಮುಖಂಡನಾಗಿ ಹಿಜಾಬ್‌ ಹೋರಾಟ ಸಂದರ್ಭ ನೀಡಿದ ಹೇಳಿಕೆಗಳು ವೋಟ್‌ ಬ್ಯಾಂಕ್‌ ಗಟ್ಟಿಗೊಳಿಸುವಲ್ಲಿ ನೆರವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕಾಂಗ್ರೆಸ್‌ ಒಗ್ಗಟ್ಟಿನ ಧ್ವನಿ ಸೊರಕೆ: ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ವಿನಯ್‌ ಕುಮಾರ್‌ ಸೊರಕೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸೊರೆಕೆ ಹೆಸರು ಇದೆ ಎನ್ನಲಾಗಿದೆ. ಅದೇ ರೀತಿ ವಿನಯ್‌ ಕುಮಾರ್‌ ಸೊರಕೆ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದವರಲ್ಲ. ಅದಕ್ಕೆ ತಕ್ಕಂತೆ ಸಚಿವ ಸ್ಥಾನವೂ ದೊರೆತ ಕಾರಣ ಕಾಪು ಕ್ಷೇತ್ರದ ಅಭಿವೃದ್ಧಿಗೆ ವರವಾಗಿದ್ದು ಸುಳ್ಳಲ್ಲ. ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದು, ಹಿರಿಯ ನಾಯಕರೊಂದಿಗೆ ಸಮನ್ವಯದ ಕಾರಣದಿಂದ ಅವರ ಓಟಕ್ಕೆ ವೇಗ ದೊರೆತಿದೆ. ಸೊರಕೆ ಈಗಾಗಲೇ ಪ್ರಚಾರ ಆರಂಭಿಸಿದ್ದು ಕ್ಷೇತ್ರದ ಜನರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು