News Karnataka Kannada
Tuesday, May 07 2024
ಮಂಗಳೂರು

ಮಂಗಳೂರು: ಬಿಜೆಪಿ ಆಡಳಿತ ಪಾಲಿಕೆಯಿಂದಲೇ ಬೀಫ್ ಸ್ಟಾಲ್ ಗಳಿಗೆ ಅವಕಾಶ, ವಿಹಿಂಪ ಕಿಡಿ

Mangluru
Photo Credit : Facebook Wikipedia

ಮಂಗಳೂರು: ​ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ಮಾಡಿಕೊಟ್ಟಿರುವುದು ವಿಶ್ವ ಹಿಂದೂ ಪರಿಷತ್ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ವೇಳೇ ಯೋಜನೆ ಕೈಬಿಡದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಹಿಂಪ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಮಂಗಳೂರು ಪಾಲಿಕೆಯಲ್ಲೂ ಬಿಜೆಪಿ ಆಡಳಿತವಿದೆ. ಜೊತೆಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡ ಇದೆ. ಆದರೂ ಭೀಫ್ ಸ್ಟಾಲ್ ನಿರ್ಮಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು ಈ ಯೋಜನೆ ಕೈಬಿಡದೇ ಇದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ವಿಹಿಂಪ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ಮಾಡಿಕೊಡಲಾಗಿದೆ. 9 ಬೀಫ್ ಸ್ಟಾಲ್ ನಿರ್ಮಾಣದ ನೀಲ ನಕಾಶೆ ಸಿದ್ದಗೊಂಡಿದ್ದು.114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣ ಅಗುತ್ತಿದೆ

ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರಿಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ನಕ್ಷೆ ಸಿದ್ಧ ಅಗಿದೆ.

18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿರುವ ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ, ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರೋ ನೂತನ ಮಾರುಕಟ್ಟೆ ಇದಾಗಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ ನಡೆಯಲಿದ್ದು ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ಪಾಲಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಅಕ್ರೋಶ ಹೊರ ಹಾಕಿದೆ.

ತರಕಾರಿ, ಕೋಳಿ ಅಂಗಡಿಗಳ ಜೊತೆಗೆ ಬೀಫ್ ಸ್ಟಾಲ್ ಗೆ ಅವಕಾಶ ನೀಡಲಾಗಿದೆ. ಜೊತೆಗೆ ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕವೂ ಬಿಜೆಪಿಯಿಂದ ಬೀಫ್ ಸ್ಟಾಲ್ ಗೆ ಅವಕಾಶ ನೀಡಿರುವುದು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು