News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ನದಿ ದಡದಲ್ಲಿ ಲಂಗರು ಹಾಕಿದ್ದ ದೋಣಿಗಳು ಬೆಂಕಿಗೆ ಆಹುತಿ

Boats anchored on the banks of river catch fire
Photo Credit : By Author

ಮಂಗಳೂರು: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಬೆಂಕಿಗೆ ಆಹುತಿಯಾಗಿವೆ. ನಗರದ ಹೊರವಲಯದ ಬೆಂಗ್ರೆ ನದಿ ದಡದಲ್ಲಿ ಈ ಘಟನೆ ನಡೆದಿದೆ.

ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅದರ ಪಕ್ಕದಲ್ಲಿ ಇದ್ದ ಇತರ ದೋಣಿಗಳಿಗೂ ಬೆಂಕಿ ವ್ಯಾಪಿಸಿದೆ. ಮೂರಕ್ಕೂ ಹೆಚ್ಚು ಲಂಗರು ಹಾಕಿದ ದೋಣಿಗಳು ಬೆಂಕಿಗೆ ಆಹುತಿಯಾಗಿದೆ.

ದೋಣಿಗಳಲ್ಲಿ ತಾಂತ್ರಿಕ ದೋಷ ಇದ್ದುದರಿಂದ ದುರಸ್ತಿಗಾಗಿ ಲಂಗರು ಹಾಕಲಾಗಿತ್ತು. ದುರಸ್ತಿ ಕಾರ್ಯದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ದೋಣಿಗಳು ಲಕ್ಷದ್ವೀಪಕ್ಕೆ ಸರಕುಗಳನ್ನು ಸಾಗಿಸುತ್ತಿದ್ದವು. ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು