ಮಂಗಳೂರು: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಬೆಂಕಿಗೆ ಆಹುತಿಯಾಗಿವೆ. ನಗರದ ಹೊರವಲಯದ ಬೆಂಗ್ರೆ ನದಿ ದಡದಲ್ಲಿ ಈ ಘಟನೆ ನಡೆದಿದೆ.
ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅದರ ಪಕ್ಕದಲ್ಲಿ ಇದ್ದ ಇತರ ದೋಣಿಗಳಿಗೂ ಬೆಂಕಿ ವ್ಯಾಪಿಸಿದೆ. ಮೂರಕ್ಕೂ ಹೆಚ್ಚು ಲಂಗರು ಹಾಕಿದ ದೋಣಿಗಳು ಬೆಂಕಿಗೆ ಆಹುತಿಯಾಗಿದೆ.
ದೋಣಿಗಳಲ್ಲಿ ತಾಂತ್ರಿಕ ದೋಷ ಇದ್ದುದರಿಂದ ದುರಸ್ತಿಗಾಗಿ ಲಂಗರು ಹಾಕಲಾಗಿತ್ತು. ದುರಸ್ತಿ ಕಾರ್ಯದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ದೋಣಿಗಳು ಲಕ್ಷದ್ವೀಪಕ್ಕೆ ಸರಕುಗಳನ್ನು ಸಾಗಿಸುತ್ತಿದ್ದವು. ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.