ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಅರಣ್ಯವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಾಡೆಮ್ಮೆಯೊಂದರ ಮೃತದೇಹ ಪತ್ತೆಯಾಗಿದೆ.
ಕಳೆದ ನಾಲ್ಕು ದಿನದ ಹಿಂದೆ ಈ ಕಾಡೆಮ್ಮೆ ಸಾವನ್ನಪ್ಪಿರುವ ಸಾಧ್ಯತೆ ಇದ್ದು ಇಂದು ಕಾಡೆಮ್ಮೆಯ ಮೃತದೇಹ ತೇಲುತ್ತಾ ಬಂದಿದೆ. ಪುಳಿಕುಕ್ಕು ಸೇತುವೆಯ ಕೆಳಗಡೆ ಕಾಡೆಮ್ಮೆಯ ಮೃತದೇಹ ಇದ್ದು, ಸ್ಥಳಕ್ಕೆ ಪಂಜ ವಲಯ ಉಪ ಅರಣ್ಯಾಧಿಕಾರಿ ಅಜಿತ್ ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ಆಗಮಿಸಿದ್ದಾರೆ, ಯಾವ ಕಾರಣದಿಂದಾಗಿ ಕಾಡೆಮ್ಮೆ ಸಾವನ್ನಪ್ಪಿದೆ ಎಂದು ಮಹಜರು ನಂತರ ತಿಳಿದು ಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.