ಮಂಗಳೂರು: ಕೂಳೂರು ಬಿಜೆಪಿ ಶಕ್ತಿಕೇಂದ್ರದ ಸಕ್ರಿಯ ಕಾರ್ಯಕರ್ತ 2ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್ ಕುಮಾರ್ ಎಂಬ ಯುವಕನ ಶವ ಕೂಳೂರು ಸೇತುವೆ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಕೂಳೂರು ನಿವಾಸಿಯಾಗಿದ್ದ ಚೇತನಕುಮಾರ್ ಮೆಕ್ಯಾನಿಕಲ್ ಡಿಪ್ಲೊಮಾ ಪೂರೈಸಿ ಬೈಕಂಪಾಡಿಯ ಸಿಗ್ನೆಟ್ ಕೆಂಟ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ 7ವರ್ಷಗಳಿಂದಲೂ ಅಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನೆಗೆ ಹಣಕಾಸು ತೊಂದರೆ ಇರಲಿಲ್ಲ. ಬೇರೆ ಯಾವುದೇ ಚಟ ಅಭ್ಯಾಸವಿರಲಿಲ್ಲ ಆದ್ರೆ ಜುಲೈ ಎರಡರಂದು ಸಂಜೆ ದಿಢೀರ್ ನಾಪತ್ತೆಯಾಗಿದ್ದು ಮನೆಯವರಲ್ಲದೆ ಅಲ್ಲಿನ ಯುವಕರು ದಂಗುಬಡಿಸಿತ್ತು ಹೀಗಾಗಿ ಚೇತನ ನಾಪತ್ತೆಯಾಗಿದ್ದ ವಿಚಾರವೇ ಸೋಷಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿತ್ತು.
ಇದೀಗ ಮೃತದೇಹ ನದಿಯಲ್ಲಿ ಸಿಗುತ್ತಲೇ ಮನೆಯವರು ಅದನ್ನು ದೃಢಪಡಿಸಿದ್ದಾರೆ ಅಲ್ಲದೆ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲವೆಂದು ಹೇಳಿದ್ದಾರೆ . ಆತನ ಗೆಳೆಯರ ಮಾಹಿತಿಯ ಪ್ರಕಾರ ಇತ್ತೀಚೆಗೆ ಸ್ವಲ್ಪ ಹಣಕಾಸಿನ ತೊಂದರೆಗೆ ಈಡಾಗಿದ್ದ ಹಣ ಪಡೆದಿದ್ದ ವ್ಯಕ್ತಿಗಳು ಹಿಂತಿರುಗಿಸದೆ ಕೈಕೊಟ್ಟಿದ್ದರೂ ಕೈ ಸಾಲ ಪಡೆದು ತೀರಿಸಲಾಗದೆ ಚಿಂತೆಗೆ ಒಳಗಾಗಿದ್ದ ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಸಿ ಹಣವನೆಲ್ಲಾ ಕಳಕೊಂಡಿದ್ದ ಇದೆ ಹುಚ್ಚಿನಲ್ಲಿ ಇತ್ತೀಚೆಗೆ ಕಂಪೆನಿಯಲ್ಲಿದ್ದ ಉದ್ಯೋಗವನ್ನು ಕಳಕೊಂಡಿದ್ದ ಇದರ ಚಿಂತೆಯಿಂದ ಮನೆಯಲ್ಲಿ ಖಿನ್ನನಾಗುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ.
ಹೆತ್ತವರ 4ಗಂಡು ಮಕ್ಕಳಲ್ಲಿ ಮೂರನೆಯವರು ಆಗಿರುವ ಚೇತನ್ ಕುಮಾರ್ ಸಾವಿನ ಬಗ್ಗೆ ಜೊತೆಗಿದ್ದ ಯುವಕರಲ್ಲಿ ಅನುಮಾನ ಮೂಡಿಸಿತ್ತು ಅಂಥದೇನೂ ಆಪತ್ತು ತೊಂದರೆಯಿಲ್ಲದ ಯುವಕ ಯಾಕಾಗಿ ಸಾವು ಕಂಡ ಅನ್ನುವ ಪ್ರಶ್ನೆ ಮಾಡುತ್ತಿದ್ದರು ಹಿಂದು ಸಂಘಟನೆ ಬಿಜೆಪಿಯಲ್ಲಿ ಸಕ್ರಿಯವಾಗಿ ಹಠಾತ್ತಾಗಿ ಸಾವಿಗೆ ಶರಣಾಗಿದ್ದಾನೆ ಈ ಬಗ್ಗೆ ಕಾವೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಪೊಲೀಸರು ಲವ್ ಅಫೇರ್ ಇದೆ ಕೈಸಾಲ ಇತ್ತೇ ಅಥವಾ ಬೇರೆ ಯಾವುದಾದ್ರೂ ಚಟಕ್ಕೆ ಅಂಟಿಕೊಂಡಿದ್ದಾನೆ ಅನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.