ಮಂಗಳೂರು: ಸುಳ್ಯ ತಾಲ್ಲೂಕಿನ ಎಲಿಮಲೆ ಗ್ರಾಮದ ಬಳಿ ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದು ಅಣ್ಣ, ತಂಗಿ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳು ಅಣ್ಣ ನಿಶಾಂತ್, ತಂಗಿ ಮೋಕ್ಷಾ, ಬಾಜಿನಡ್ಕ ನಿವಾಸಿಗಳಾದ ನಿಶಾಂತ್ ಮತ್ತು ಮೋಕ್ಷಾ ಸ್ಕೂಟಿಯಲ್ಲಿ ಎಲಿಮಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಜಬಳೆಯಲ್ಲಿ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೋಕ್ಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.