News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಮಾದಕ ವಸ್ತು ಪ್ರತ್ಯೇಕ ಪ್ರಕರಣ, ಮೂರನ್ನು ಬಂಧಿಸಿದ ಸಿಸಿಬಿ ಪೊಲೀಸರು

Mng
Photo Credit : News Kannada

ಮಂಗಳೂರು:  ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದು ನಗರದ ಫ್ಲಾಟ್ ಒಂದರಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶಾಮಸುಂದರ್ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಪ್ಲಾಟಿಗೆ ದಾಳಿ ನಡೆಸಿ ಒಟ್ಟು 2 ಕೆ.ಜಿ ತೂಕದ 50,000 ಅಮೂಲ್ಯದ ಗಾಂಜಾ 2 ಮೊಬೈಲ್ ಫೋನ್ ನಗದು ರೂಪಾಯಿ 7000 ,ಡಿಜಿಟಲ್ ತೂಕದ ಮಾಪನ ವಶಪಡಿಸಿಕೊಳ್ಳಲಾಗಿದೆ.

ವಶಕ್ಕೆ ಪಡೆದ ಸೊತ್ತುಗಳ ಮೌಲ್ಯ 78,000 ಆಗಬಹುದು .ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿಕೊಂಡು ಬಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ

ನವಾಜ್ , ಮಾದಕ ವಸ್ತುವಾದ ಎಂ ಡಿ ಎಂ ಏ ಅನ್ನು ಹೊಂದಿಕೊಂಡು ಕೇರಳ ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆತನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕೇರಳದ ಗಡಿ ಭಾಗ ಹಾಗೂ ಮುಡಿಪು ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ಪೆಕ್ಟರ್ ಶಾಮ್ ಸುಂದರ್ ರವರ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 15 ಗ್ರಾಂ ತೂಕದ ರೂಪಾಯಿ 75000 ಮೌಲ್ಯದ ಎಂ ಡಿ ಎಂ ಎ ಮಾದಕ ವಸ್ತುವನ್ನು ಮೊಬೈಲ್ ಫೋನ್ ಎರಡು ಡಿಜಿಟಲ್ ತೂಕದ ಮಾಪನ ನಗದು ರೂಪಾಯಿ 3200 ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ನವಾಜ್ ಎಂಬಾತ ವಿರುದ್ಧ ಈ ಹಿಂದೆ ವಿವಿಧ ಪೊಲೀಸ್ ಠಾಣೆಯಲ್ಲಿ ಹಲ್ಲೆ , ಕೊಲೆಯತ್ನ ದರೋಡೆಗೆ 11 ಪ್ರಕರಣಗಳು ದಾಖಲಾಗಿರುತ್ತದೆ

ಕಿರಣ್ ರಾಜ್ ಶೆಟ್ಟಿ .ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ ಮಾಡಿ ಆರೋಪಿಯ ಸೆರೆ ಹಿಡಿದಿದ್ದಾರೆ .ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಆಲ್ಟೊ 800 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತುವಾದ ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 27.100 ಕೆಜಿ ಗಾಂಜಾ ವನ್ನ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ

ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾರುತಿ ಆಲ್ಟೊ 800 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಬಿ ನೇತೃತ್ವದ ಸಿಸಿಬಿ ಪೊಲೀಸರು ನೀರು ಮಾರ್ಗದ ಕುಟ್ಟಿಕಲ ಎಂಬಲ್ಲಿ ಪತ್ತೆಹಚ್ಚಿ ಕಾರಿನಲ್ಲಿ ಅಕ್ರಮವಾಗಿದ್ದ ಕಿರಣ್ ರಾಜ್ ಶೆಟ್ಟಿ ಅನು ಬಂಧಿಸಿದ್ದಾರೆ .ಆರೋಪಿಯ ವಶದಲ್ಲಿದ್ದ ಮಾರುತಿ ಆಲ್ಟೊ 800 ಕಾರನ್ನು ಸ್ವಾಧೀನ ಪಡಿಸಿಕೊಂಡು ಅದರಲ್ಲಿ ಸಾಗಟ ಮಾಡುತ್ತಿದ್ದ 27.100 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಕಿರಣ್ ರಾಜ್ ಶೆಟ್ಟಿ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯು ಕರ್ನಾಟಕ ಕೇರಳ ರಾಜ್ಯದ ಗಡಿ ಭಾಗದವನಾಗಿದ್ದು ಕರ್ನಾಟಕ ಕೇರಳ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಆಂಧ್ರಪ್ರದೇಶದಿಂದ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದು ಮಂಗಳೂರು ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದನು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು