ಮಂಗಳೂರು: ನ್ಯೂಸ್ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಥ್ಯಾಂಕ್ಯೂ ಕರ್ನಾಟಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಮೈಲಿಗಲ್ಲನ್ನು ಸಾಧಿಸಲು ಸ್ಪಿಯರ್ ಹೆಡ್ ಮೀಡಿಯಾ ಗ್ರೂಪ್ ಅನ್ನು ಬೆಂಬಲಿಸಿದ ವಿಶ್ವದಾದ್ಯಂತದ ಕನ್ನಡಿಗರಿಗೆ ಸಂಸ್ಥೆ ಧನ್ಯವಾದ ಸಲ್ಲಿಸಿದೆ.
ಥ್ಯಾಂಕ್ಯೂ ಕರ್ನಾಟಕ ಸರಣಿಯಡಿ ಪ್ರತಿ ಗುರುವಾರ ಪ್ರಸಾರವಾಗುವ ಮಹಿಳೆಯರು, ಉದ್ಯಮಿಗಳು ಮತ್ತು ಸಾಧಕರನ್ನು ಉತ್ತೇಜಿಸುವ ಕಾರ್ಯಕ್ರಮವೇ ವುಮೆನ್ಯಾ.
ಏಪ್ರಿಲ್ 14 ರ ಗುರುವಾರ ಪ್ರಸಾರವಾದ 25 ನೇ ಸಂಚಿಕೆಯ ಅತಿಥಿಯಾಗಿ ವಾಸ್ತುಶಿಲ್ಪಿ ಅಪೇಕ್ಷಾ ನಾಯಕ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನಿರೂಪಕಿ ಅನನ್ಯಾ ಹೆಗ್ಡೆ ನಿರೂಪಿಸಿದರು.
ಈ ಕಾರ್ಯಕ್ರಮವನ್ನು ನ್ಯೂಸ್ ಕರ್ನಾಟಕ.ಕಾಂ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಯಿತು.
ಅಪೇಕ್ಷಾ ನಾಯಕ್ ತನ್ನ ಬಾಲ್ಯವನ್ನು, ತನ್ನ ಸೋದರ ಸಂಬಂಧಿಗಳೊಂದಿಗೆ ಬೇಸಿಗೆ ರಜಾದಿನಗಳನ್ನು ಕಳೆದ ಸಮಯವನ್ನು ನೆನಪಿಸಿಕೊಂಡರು.
“ಕಚೇರಿಯಲ್ಲಿ ಕೆಲಸ ಮಾಡುವುದರಲ್ಲಿ ನನಗೆ ಯಾವುದೇ ಖುಷಿ ಸಿಗಲಿಲ್ಲ. ಈ ನಿಟ್ಟಿನಲ್ಲಿ ಸ್ವತಂತ್ರ ವಾಸ್ತುಶಿಲ್ಪಿಯಾಗಿ ತಮ್ಮ ವೃತ್ತಿ ಜೀವನ ರೂಪಿಸಿಕೊಂಡ ಬಗ್ಗೆ ಅನುಭವ ಹಂಚಿಕೊಂಡರು.
ನನ್ನ ಅನಿಸಿಕೆ, ಅನುಭವ ಹಂಚಿಕೊಳ್ಳಲು ಒಬ್ಬ ಉತ್ತಮ ಸಂಗಾತಿ ದೊರೆತಿದ್ದಾರೆ. ಕಚೇರಿ ಮತ್ತು ಮನೆಯ ಕಾರ್ಯಕ್ಕೆ ಸಮಾನ ಒತ್ತು ನೀಡಿದ್ದು, ಕುಟುಂಬ ಸದಸ್ಯರು ನನ್ನ ಸಾಧನೆಗೆ ಪ್ರೇರಣೆ ಎಂದರು.
ಪ್ರತಿ ಮನೆಯೂ ನಿಮ್ಮ ಸಾಧನೆಗೆ ಪ್ರೇರಣೆ. ಹೆಣ್ಣು ಗಂಡೆಂಬ ಬೇಧವಿಲ್ಲದೆ ಎಲ್ಲರೂ ಕೂಡ ಸಾಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. .
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…