ಮಂಗಳೂರು: ಸುರತ್ಕಲ್ ವ್ಯಾಪ್ತಿಯ ಸಾರ್ವಜನಿಕರಿಗೆ ಸುಸಜ್ಜಿತ ವಲಯ ಕಚೇರಿ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂದಾಜು ಮೊತ್ತ ರೂ. 425.00 ಲಕ್ಷ ವೆಚ್ಚದಲ್ಲಿ ನೂತನವಾಗಿ ಸುಸಜ್ಜಿತ ಸುರತ್ಕಲ್ ವಲಯ ಕಚೇರಿ ಕಟ್ಟಡವನ್ನು ನಿರ್ಮಿಸಲಾಗಿದ್ದು, ಅದರಂತೆ ಆ.20 ರ ಶನಿವಾರದಂದು ಅಪರಾಹ್ನ2 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿರುತ್ತದೆ.
ಈ ಸಂಬಂಧ ಸಚಿವರು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿ ಸುನೀಲ್ ಕುಮಾರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿರುವರು.
ಸದ್ರಿ ಕಾರ್ಯಕ್ರಮದಲ್ಲಿ ಸಂಸದರು ನಳಿನ್ ಕುಮಾರ್ ಕಟೀಲು, ಹಾಗೂ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಡಾ. ಭರತ್ ಶೆಟ್ಟಿ ವೈ ಉಪಸ್ಥಿತಿಯಲ್ಲಿ ಮತ್ತು ಮಂಗಳೂರು ಮಹಾನಗರಪಾಲಿಕೆ ಮಹಾಪೌರರು ಪ್ರೇಮಾನಂದ ಶೆಟ್ಟಿ, ಅಧ್ಯಕ್ಷತೆಯನ್ನು ವಹಿಸಲಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಈ ಮೂಲಕ ಕೋರಲಾಗಿದೆ.