ಮಂಗಳೂರು: ಪುತ್ತೂರು ಶಾಸಕರು ಮಹಿಳೆಯೊಂದಿಗಿರುವ ಫೋಟೋ ವೈರಲ್ ಆಗಿ ಅವರಿಗೆ ಕೊನೆ ಹಂತದಲ್ಲಿ ಟಿಕೆಟ್ ಕೈತಪ್ಪಲು ಒಂದು ಕಾರಣವಾಗಿದ್ದು ಎಲ್ಲರಿಗೂ ತಿಳಿದೆ ಇದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಸಕರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ, ಫೋಟೋ, ವೀಡಿಯೋಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿಕರ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಕರಾವಳಿಯ ಹಲವು ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.