ಮಂಗಳೂರು: ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯವನ್ನು ಖಂಡಿಸಿ ಮಂಗಳೂರು ನಗರ ಬ್ಲಾಕ್, ಮಂಗಳೂರು ಉತ್ತರ ಬ್ಲಾಕ್ ಮತ್ತು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಮಾತನಾಡಿ, 2013ರಲ್ಲಿ ಪಾಲಿಕೆಯಲ್ಲಿ ಬಿಜೆಪಿ ಸರಕಾರ ಇದ್ದಾಗಲೂ ಇದೇ ಸಮಸ್ಯೆ ಎದುರಾಗಿತ್ತು. ರಸ್ತೆ ತುಂಬೆಲ್ಲಾ ಕಸ ಸುರಿಯುತ್ತಿತ್ತು. ಜನಸಾಮಾನ್ಯರು ತಮ್ಮ ಮೂಲ ಸೌಕರ್ಯಗಳನ್ನು ಅನುಭವಿಸಲು ಸಾಧ್ಯವಾಗುತ್ತಿಲ್ಲ. ತ್ಯಾಜ್ಯ ಸಂಗ್ರಹಿಸುವ ವಾಹನಗಳು ಹಲವಾರಿದ್ದರೂ ನಗರದಲ್ಲಿ ಓಡುತ್ತಿರುವುದು ಕೆಲವು ಮಾತ್ರ. ಆಂಟನಿ ತ್ಯಾಜ್ಯ ಸಂಸ್ಕರಣಾ ವಾಹನಗಳ ಚಾಲಕರು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು, ಎರಡು ದಿನದೊಳಗೆ ತ್ಯಾಜ್ಯ ಸಂಗ್ರಹಿಸದಿದ್ದರೆ ಪ್ರತಿ ವಾರ್ಡ್ನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಹೈವನ್ ಡಿಸೋಜಾ ,ನವೀನ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.