News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಮನಪಾ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Mangaluru: Congress protests against manapa administration's failure
Photo Credit : News Kannada

ಮಂಗಳೂರು: ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯವನ್ನು ಖಂಡಿಸಿ ಮಂಗಳೂರು ನಗರ ಬ್ಲಾಕ್, ಮಂಗಳೂರು ಉತ್ತರ ಬ್ಲಾಕ್ ಮತ್ತು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಮಾತನಾಡಿ, 2013ರಲ್ಲಿ ಪಾಲಿಕೆಯಲ್ಲಿ ಬಿಜೆಪಿ ಸರಕಾರ ಇದ್ದಾಗಲೂ ಇದೇ ಸಮಸ್ಯೆ ಎದುರಾಗಿತ್ತು. ರಸ್ತೆ ತುಂಬೆಲ್ಲಾ ಕಸ ಸುರಿಯುತ್ತಿತ್ತು. ಜನಸಾಮಾನ್ಯರು ತಮ್ಮ ಮೂಲ ಸೌಕರ್ಯಗಳನ್ನು ಅನುಭವಿಸಲು ಸಾಧ್ಯವಾಗುತ್ತಿಲ್ಲ. ತ್ಯಾಜ್ಯ ಸಂಗ್ರಹಿಸುವ ವಾಹನಗಳು ಹಲವಾರಿದ್ದರೂ ನಗರದಲ್ಲಿ ಓಡುತ್ತಿರುವುದು ಕೆಲವು ಮಾತ್ರ. ಆಂಟನಿ ತ್ಯಾಜ್ಯ ಸಂಸ್ಕರಣಾ ವಾಹನಗಳ ಚಾಲಕರು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು, ಎರಡು ದಿನದೊಳಗೆ ತ್ಯಾಜ್ಯ ಸಂಗ್ರಹಿಸದಿದ್ದರೆ ಪ್ರತಿ ವಾರ್ಡ್‌ನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಹೈವನ್ ಡಿಸೋಜಾ ,ನವೀನ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು