ಮಂಗಳೂರು: ನಗರದ ವಲೆನ್ಸಿಯ ಸೂಟರ್ ಪೇಟೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸಭಾ ಚುನಾವಣಾ ಪ್ರಯುಕ್ತ ರೋಡ್ ಶೋ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರು ಮಾತನಾಡುತ್ತಾ, ಈ ಬಾರಿ ರಾಜ್ಯದಲ್ಲಿ ಖಂಡಿತವಾಗಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರಲಿದೆ. ಈಗಿನ ಬಿಜೆಪಿ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವುದೇ ಜನ ಪರ ಕಾರ್ಯಕ್ರಮ ಈ ಸರಕಾರ ಮಾಡಿರುವುದಿಲ್ಲ. ಹಿಂದಿನ ಕಾಂಗ್ರೆಸ್ ಸರಕಾರ ಮಾಡಿರುವ ಅನೇಕ ಯೋಜನೆಗಳನ್ನು ಬಿಜೆಪಿ ಸರಕಾರ ಮುಂದುವರಿಸಲಿಲ್ಲ. ಇದು ಜನತೆಗೆ ಮಾಡಿದ ಅವಮಾನ. ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಆಡಳಿತ ಮಾಡಲು ಯೋಗ್ಯರಲ್ಲ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಮಾಜಿ ಮೇಯರ್ ಜಸಿಂತಾ ಅಲ್ಫ್ರೆಡ್, ಮಾಜಿ ಕಾರ್ಪೊರೇಟರ್ ಅಪ್ಪಿ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಪ್ರಮುಖರಾದ ಮೆರಿಲ್ ರೇಗೋ, ಟಿ. ಕೆ. ಸುಧೀರ್, ಹೊನ್ನಯ್ಯ, ರಮಾನಂದ ಬೋಲಾರ, ಸದಾಶಿವ ಅಮೀನ್, ದುರ್ಗಾ ಪ್ರಸಾದ್, ಅಬ್ದುಲ್ ಹಮೀದ್, ಮೊದಲಾದವರು ಉಪಸ್ಥಿತರಿದ್ದರು.