ಮಂಗಳೂರು: ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಸೇವೆಗೆ ಬಾಳೆಹಣ್ಣು ಪೂರೈಸುವ ಗುತ್ತಿಗೆಯನ್ನು ಹಿಂದೂಯೇತರರಿಗೆ ನೀಡಿರುವ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಬಲ ಪ್ರತಿರೋಧ ವ್ಯಕ್ತವಾಗತೊಡಗಿದೆ
ಕದಳಿ ಬಾಳೆ ಹಣ್ಣನ್ನು ೨೦೨೧ 1ರಿಂದ 2022 ಜೂನ್ ಮೂವತ್ತು ರವರೆಗೆ ಸರಬರಾಜು ಮಾಡಲು ಅಧಿಕೃತ ಮಾರಾಟಗಾರರಿಂದ ದರಪಟ್ಟಿಯನ್ನು ಆಹ್ವಾನಿಸಿ ಕಳೆದ ವರ್ಷ ಕೊಟೇಶನ್ ಕರೆಯಲಾಗಿತ್ತು. ಆ ಕೊಟೇಶನ್ ನಲ್ಲಿ ಮೂವರು ಹಿಂದೂಯೇತರ ಸಹಿತ ಓರ್ವ ಹಿಂದೂ ವ್ಯಾಪಾರಸ್ಥರು ದರಪಟ್ಟಿಯಲ್ಲಿ ನಮೂದಿಸಿದ್ದರೂ.
ಅದರಲ್ಲಿ ಮಂಗಳೂರು ಸೆಂಟ್ರಲ್ ಮಾರ್ಕೆಟ್ ನ ಮುಸ್ಲಿಂ ವ್ಯಾಪಾರಸ್ಥರೊಬ್ಬರು ಪ್ರತಿ ಬಾಳೆಹಣ್ಣಿಗೆ ೧.95ದರ ನಮೂದಿಸಿದ್ದು ಇದು ಅತ್ಯಂತ ಕಡಿಮೆ ದರವಾದ್ದರಿಂದ ಇದನ್ನೇ ಅಂತಿಮಗೊಳಿಸಲಾಗಿತ್ತು ಈಗಿರುವ ಗುತ್ತಿಗೆ ಅವಧಿ ಜೂನ್ ಮೂವತ್ತು ಕ್ಕೆ ಮುಕ್ತಾಯಗೊಳ್ಳುತ್ತಿದ್ದು ಹೊಸ ಟೆಂಡರ್ ಕರೆಯಬೇಕಾಗಿದೆ.
ಅಷ್ಟರಲ್ಲಿ ಗುತ್ತಿಗೆ ಹಿಂದೂಯೇತರರ ಪಾಲಾಗಿರುವುದು ಹಿಂದೂ ಸಂಘಟನೆಗಳ ಗಮನಕ್ಕೆ ಬಂದಿದೆ ಧಾರ್ಮಿಕ ದತ್ತಿ ಇಲಾಖೆ ತಿದ್ದುಪಡಿ ಕಾಯ್ದೆ ಪ್ರಕಾರ ಇನ್ನೂ ಧಾರ್ಮಿಕ ಕೇಂದ್ರಗಳ ಯಾವುದೇ ವಹಿವಾಟನ್ನೂ ಅನ್ಯಮತೀಯರಿಗೆ ನೀಡುವಂತಿಲ್ಲ ಆಗಿದ್ದು ಕುಡುಪು ದೇವಸ್ಥಾನಕ್ಕೆ ಬಾಳೆಹಣ್ಣು ಪೂರೈಕೆ ಗುತ್ತಿಗೆಯನ್ನು ಅನ್ಯಮತೀಯ ವ್ಯಾಪಾರಿಗಳಿಗೆ ನೀಡಲಾಗಿದೆ.
ಇದನ್ನು ರದ್ದು ಪಡಿಸುವಂತೆ ಹಿಂದೂ ಸಂಘಟನೆಯ ಮುಖಂಡ ಪುತ್ತೂರಿನ ದಿನೇಶ್ ಕುಮಾರ್ ಜೈನ್ ಎಂಬುವರು ದೇವಸ್ಥಾನದ ಅಧಿಕಾರಿಗೆ ಕರೆ ಮಾಡಿ ಆಗ್ರಹಿಸಿರುವ ಆಡಿಯೋ ಕ್ಲಿಪ್ ಇದೀಗ ವೈರಲ್ ಆಗಿದೆ.