News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣ ಸಂತ್ರಸ್ತ, ಪುರುಷೋತ್ತಮ ಪೂಜಾರಿ ನವೀಕೃತ ಮನೆ ಹಸ್ತಾಂತರ

Cooker bomb blast victim Purushottam Poojary handed over renovated house
Photo Credit : News Kannada

ಮಂಗಳೂರು: ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಇಂದು ಹಸ್ತಾಂತರಿಸಲಾಯಿತು. ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾದ ಈ ಮನೆಯನ್ನು ಯುಗಾದಿ ಹಬ್ಬದ ಕೊಡುಗೆಯಾಗಿಯಾಗಿ ನೀಡಲಾಯಿತು.

ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ಫಾ.ಜೆ.ಬಿ.ಕ್ರಾಸ್ತಾ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಉದ್ಯಮಿಗಳಾದ ರೋಹನ್ ಮೊಂತೆರೋ, ರಘುನಾಥ್ ಮಾಬೆನ್‌, ಧರ್ಮರಾಜ ಅಮ್ಮುಂಜೆ, ಕಾರ್ಪೊರೇಟರ್ ಪುವೀಣ್ ಚಂದ್ರ ಆಳ್ವ, ಮಾಜಿ ಕಾರ್ಪೊರೇಟರ್ ಡಿ.ಕೆ.ಅಶೋಕ್ ಕುಮಾರ್, ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ, ಸತ್ಯಜಿತ್ ಸುರತ್ಕಲ್, ಪ್ರಮುಖರಾದ ದೇವೇಂದು ಪೂಜಾರಿ, ಮೋಹನ್ ನೆಕ್ಕರೆಮಾರು, ಸೂರ್ಯಕಾಂತಿ ಸುವರ್ಣ, ಆಲ್ವಿನ್ ಪ್ರಕಾಶ್, ನಾಗವೇಣಿ, ಹಿತಾ ಪ್ರವೀಣ್ ಕುಮಾರ್, ಶೈಲೇಂದ್ರ ಸುವರ್ಣ, ರೋಹಿತ್‌ ಕುವೈತ್‌, ಜಯಾನಂದ ಪೂಜಾರಿ, ರಾಜೇಶ್ ಬಿ., ಪುವೀಣ್ ಕುಮಾರ್ ಹಾಗೂ ಗುರುಬೆಳದಿಂಗಳು ಫೌಂಡೇಶನ್‌ನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು