News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

Mnglr
Photo Credit : News Kannada

ಮಂಗಳೂರು: ಒಂದೂವರೆ ವರ್ಷದ ಹಿಂದೆ ಈ ದಂಪತಿಗೆ ಮದುವೆಯಾಗಿತ್ತು. ಮಲ್ಲಿಕಾರ್ಜುನ ಅವರು ಗ್ರಾಫಿಕ್ ಡಿಸೈನರ್ ಆಗಿದ್ದರೆ, ಸೌಮ್ಯ ಅವರು ತಾತ್ಕಾಲಿಕ ನೆಲೆಯಲ್ಲಿ ಕೆಪಿಟಿಯಲ್ಲಿ ಶಿಕ್ಷಕಿಯಾಗಿದ್ದರು. ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ದಂಪತಿ ಎರಡು ದಿನದ ಹಿಂದೆ ಮಡಿಕೇರಿಗೆ ಪ್ರವಾಸ ಹೋಗಿದ್ದು ಭಾನುವಾರ ರಾತ್ರಿ ಮರಳಿ ಮಂಗಳೂರಿಗೆ ಬಂದಿದ್ದರು ಎಂಬ ಮಾಹಿತಿ ಸಿಕ್ಕಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗಿನಿಂದ ಹಿಂದಿರುಗಿದ ಬಳಿಕ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ ಆತ್ಮಹತ್ಯೆಗೆ ಶರಣು ಈ ವಿಷಯವನ್ನು ಕುಟುಂಬಸ್ಥರಿಗೆ  ಸೌಮ್ಯ ತಿಳಿಸಿದ್ದಾರೆ ಎನ್ನಲಾಗಿದೆ.

ಬಳಿಕ ಸೌಮ್ಯ ತಾವೂ ಕೂಡಾ ಆತ್ಮಹತ್ಯೆಗೆ ಶರಣಾಗಿದ್ಧಾರೆ ಎಂದು ತಿಳಿದು ಬಂದಿದೆ. ನಗರದ ಮರೋಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಿದ್ದ ದಂಪತಿಗಳಿಬ್ಬರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (35) ಮತ್ತು ಬಿಕರ್ನಕಟ್ಟೆ ನಿವಾಸಿ ಸೌಮ್ಯ ನಾಯಕ್ (34) ಎಂದು ಗುರುತಿಸಲಾಗಿದೆ.

ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದಂಪತಿ ಎರಡು ದಿನದ ಹಿಂದೆ ಮಡಿಕೇರಿಗೆ ಪ್ರವಾಸ ಹೋಗಿದ್ದು ಭಾನುವಾರ ರಾತ್ರಿ ಮರಳಿ ಮಂಗಳೂರಿಗೆ ಬಂದಿದ್ದರು. ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಎನ್. ಶಶಿ ಕುಮಾರ್ ಅವರು ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದಂಪತಿಯ ಆತ್ಮಹತ್ಯೆಗೆ ಈವರೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತನಿಖೆ ನಡೆದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು