ಮಂಗಳೂರು: ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್ ಅಲರ್ಟ್ ಘೋಷಣೆಯಾಗಿದ್ದು, ನಿನ್ನೆ ಕೇಂದ್ರ ಆರೋಗ್ಯ ಸಚಿವರಿಂದ ಮಹತ್ವದ ಸಭೆ ನಡೆದಿದ್ದು. ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಸದ್ಯ ಮಟ್ಟಿಗೆ ರಾಜ್ಯದಲ್ಲಿ ಕೋವಿಡ್ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 0.57% ಆಗಿದೆ. ರಾಜ್ಯದಲ್ಲಿ 1,272 ಸಕ್ರಿಯ ಪ್ರಕರಣಗಳು ದಾಖಲಾಗಿದೆ.
ಚಳಿಗಾಲ ಆಗಿರೋದ್ರಿಂದ ಶೀತ, ಜ್ವರ ಕೆಮ್ಮು ಸಹಜವಾಗಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ರಾಜ್ಯದಲ್ಲಿ ಮಹಮಾರಿ ಕೋವಿಡ್ ಬಗ್ಗೆ ಎಚ್ಚರಿಕೆ ನೀಡಲಾಗಿದೆ.