News Karnataka Kannada
Monday, May 06 2024
ಮಂಗಳೂರು

ಗುದದಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

Whatsapp Image 2024 03 04 At 2.34.57 Pm
Photo Credit : News Kannada

ಮಂಗಳೂರು: ಅಕ್ರಮವಾಗಿ ಅಬುದಾಭಿಯಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

729 ಗ್ರಾಂ ತೂಕದ 45,92,700 ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಈ ವ್ಯಕ್ತಿ ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನದಲ್ಲಿ ಆಗಮಿಸಿದ್ದ.

ಕಾಸರಗೋಡು ಮೂಲದವನಾದ ಇವನು ಮಾರ್ಚ್ 3ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದ ಅವನನ್ನು ಕಸ್ಟಮ್ಸ್ ಅಧಿಕಾರಿಗಳು ಪರೀಕ್ಷೆಗೆ ಒಳಪಡಿಸಿದರು. ಇದೇ ವೇಳೆ, ಆತ ಮೂರು ಮೊಟ್ಟೆಯ ಆಕಾರದ ಲಕೋಟೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡು, ನಂತರ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು