ಮಂಗಳೂರು: ಮಂಗಳೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ನಗರದ ವಿವಿಧ ಕಡೆ ನವರಾತ್ರಿ ಅಂಗವಾಗಿ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದಕ್ಕೆ ದುರ್ಗಾವಾಹಿನಿ ಸಂಘಟನೆ, ವಿಶ್ವ ಹಿಂದೂ ಪರಿಷತ್ ವಿರೋಧ ವ್ಯಕ್ತಪಡಿಸಿದೆ.
“ದಾಂಡಿಯಾ ಕಾರ್ಯಕ್ರಮದಲ್ಲಿ, ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಆರೋಪಿಸಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ” ಮಂಗಳೂರು ಪೊಲೀಸ್ ಕಮಿಷನರ್ಗೆ ದುರ್ಗಾವಾಹಿನಿ ಸಂಘಟನೆ ಮನವಿ ಮಾಡಿದೆ.
ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ದುರ್ಗಾವಾಹಿನಿ ಸಂಘಟನೆ ಆರೋಪ ಮಾಡಿದೆ ಎಂದು ವರದಿಯಾಗಿದೆ