ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ 34 ನೇ ವರ್ಷದ ಮಂಗಳೂರು ದಸರಾಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಸಭಾಂಗಣದಲ್ಲಿ ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಶೇಷ ಪೂಜೆ ಸಲ್ಲಿಸಲಾಯಿತು. ದಸರಾ ಚಾಲನೆ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಭಾಗಿಯಾಗಿದರು.
ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಪೊರೇಟರ್ ಗಳಾದ ಎಂ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಮಮತಾ ಗಟ್ಟಿ, ಅನಿಲ್ ಕುಮಾರ್, ಕಿರಣ್ ಕುಮಾರ್, ಜಯಾನಂದ ಅಂಚನ್, ಪ್ರೇಮಾನಂದ ಶೆಟ್ಟಿ, ಕ್ಷೇತ್ರದ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.